ಆಧಾರ್ ವಿಶೇಷ ಆಂದೋಲನದ ಅಂಗವಾಗಿ ಹತ್ತು ದಿನಗಳ ಕಾಲ ಹೊಸದಾಗಿ ಆಧಾರ ಕಾರ್ಡ್ ಮಾಡಿಸುವುದು, ತಿದ್ದುಪಡಿ ಸೇರಿದಂತೆ ಇನ್ನಿತರ ಆಧಾರ್ ಸಂಬಂಧಿತ ಸಮಸ್ಯೆಗಳ ಪರಿಹಾರಕ್ಕೆ ವಿಶೇಷ ಕೇಂದ್ರವನ್ನು ತೆರೆಯಲಾಗಿತ್ತು. ನಿರೀಕ್ಷೆಗೂ ಮೀರಿ ಜನರು ಬರುತ್ತಿದ್ದರಿಂದ, ಕಂಗಾಲಾದ ಸಿಬ್ಬಂದಿ ಪೋನ್ ಸ್ವಿಚ್ ಆಫ್ ಮಾಡಿಕೊಂಡು ಕೇಂದ್ರದತ್ತ ಸುಳಿಯಲಿಲ್ಲ. ಗ್ರಾಮೀಣ ಭಾಗದಿಂದ ಬಂದಂತಹ ನೂರಾರು ಜನರು ಆಧಾರ್ ಕೇಂದ್ರದ ಎದುರು ಜಮಾವಣೆಗೊಂಡಿದ್ದರು. ಆದರೆ 11 ಗಂಟೆಯಾದರೂ ಕೇಂದ್ರದ ಬಾಗಿಲು ತೆರೆಯದಿರುವುದನ್ನು ಕಂಡು ಆಕ್ರೋಶಗೊಂಡ ಸಾರ್ವಜನಿಕರು ತಹಶೀಲ್ದಾರ್ ಕಚೇರಿಯತ್ತ ಧಾವಿಸಿದರು.