‘ಕಲ್ಲು ಗಣಿಗಾರಿಕೆ ಸೇರಿ ಹಲವು ಪ್ರಕರಣಗಳಲ್ಲಿ ನನ್ನ ವಿರುದ್ಧ ಸಲ್ಲದ ದೂರು ನೀಡಿ ಹೆಸರಿಗೆ ಮಸಿ ಬಳಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಇದರ ಹಿಂದೆ ಕಾಂಗ್ರೆಸ್ ಮುಖಂಡರ ಕೈವಾಡ ಇರುವುದು ಗೊತ್ತಾಗಿದೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಕುರಿತು ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸುತ್ತಿದ್ದೇನೆ. ಲೇವಾದೇವಿ ವ್ಯವಹಾರ ಮಾಡುತ್ತಿರುವ ರವೀಂದ್ರ ಆರ್ಟಿಐ ಕಾರ್ಯಕರ್ತನ ಸೋಗಿನಲ್ಲಿ ಅಕ್ರಮವಾಗಿ ಅಪಾರ ಹಣ ಸಂಪಾದನೆ ಮಾಡಿದ್ದಾರೆ. ಫೋನ್ ಕರೆಯಲ್ಲಿ ಅವರ ಅಕ್ರಮಗಳು ದಾಖಲಾಗಿವೆ. ಅವುಗಳ ವಿವರ ಪಡೆದು ಅಕ್ರಮಗಳನ್ನು ಶೀಘ್ರ ಬಹಿರಂಗ ಮಾಡಲಾಗುವುದು’ ಎಂದು ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.