‘ಯಾರಾದರೂ ನಾನೊಬ್ಬ ಮುಸ್ಲಿಂ, ಕ್ರಿಶ್ಚಿಯನ್, ಲಿಂಗಾಯತ, ಬ್ರಾಹ್ಮಣ, ಹಿಂದೂ ಎಂದರೆ ಖುಷಿಯಾಗುತ್ತದೆ. ಏಕೆಂದರೆ ಆತನಿಗೆ ತನ್ನ ರಕ್ತದ ಪರಿಚಯ ಇದೆ ಎಂದರ್ಥ’ (ಪ್ರ.ವಾ., ಡಿ. 25) ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹೇಳಿದ್ದಾರೆ. ಈ ಸುದ್ದಿ ಓದುತ್ತಿದ್ದಂತೆಯೇ, ಇದೇ ರೀತಿ ನಮಗೆ ಆಹಾರ ಪದಾರ್ಥಗಳನ್ನು ಬೆಳೆದುಕೊಟ್ಟಿರುವ, ನಾವು ತೊಟ್ಟಿರುವ ಬಟ್ಟೆಯನ್ನು ನೇಯ್ದಿರುವ ಮತ್ತು ವಾಸಕ್ಕೆ ಮನೆಯನ್ನು ಕಟ್ಟಿರುವ ವ್ಯಕ್ತಿಗಳ ಬೆವರನ್ನು ಪರೀಕ್ಷಿಸಿದರೆ, ನಮ್ಮ ಜಾತಿ–ಧರ್ಮವನ್ನು ಮತ್ತಷ್ಟು ಖಚಿತವಾಗಿ ತಿಳಿಯಬಹುದು ಎಂಬ ಅನಿಸಿಕೆಯುಂಟಾಯಿತು.