‘ಈ ಎಲ್ಲ ದೂರುಗಳ ಬಗ್ಗೆ ಕೂಲಂಕಷ ಪರಿಶೀಲನೆಗಾಗಿ ಪ್ರತ್ಯೇಕ ತನಿಖಾ ತಂಡ ರಚಿಸಿದ್ದು, ಸತ್ಯಾಸತ್ಯತೆ ಆಧರಿಸಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಭಾಗದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದವರು ಚುನಾವಣೆಯನ್ನು ಗಂಭೀ ರವಾಗಿ ಪರಿಗಣಿಸುತ್ತಿದ್ದು, ಚಿಕ್ಕ ಚಿಕ್ಕ ವಿಷಯಗಳನ್ನೂ ದೊಡ್ಡದಾಗಿ ಬಿಂಬಿಸುವ ಪ್ರವೃತ್ತಿ ಹೆಚ್ಚುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಒಮ್ಮೊಮ್ಮೆ ಕಾರ್ಯಕರ್ತರು ನಾಯಕರ ನಿಯಂತ್ರಣಕ್ಕೂ ಸಿಗದೆ ಅಹಿತಕರ ಘಟನೆಗಳು ಸಂಭವಿಸುತ್ತಿವೆ. ಇಂತ ಹದ್ದಕ್ಕೆ ಅವಕಾಶ ನೀಡದಂತೆ ಮನವಿ ಮಾಡಿದ್ದೇನೆ’ ಎಂದರು.