ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲಡ್ಕದಲ್ಲಿ ಕೊಲೆ ಆರೋಪಿ ಮೇಲೆ ತಲವಾರಿನಿಂದ ದಾಳಿ

Last Updated 26 ಡಿಸೆಂಬರ್ 2017, 15:28 IST
ಅಕ್ಷರ ಗಾತ್ರ

ಮಂಗಳೂರು: ಕರೋಪಾಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಲೀಲ್ ಕರೋಪಾಡಿ ಕೊಲೆ ಪ್ರಕರಣದ ಆರೋಪಿ ಕೇಶವ ಎಂಬಾತನ ಮೇಲೆ ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಪಟ್ಟಣದಲ್ಲಿ ಮಂಗಳವಾರ ಸಂಜೆ ಹಲ್ಲೆ ನಡೆಸಲಾಗಿದೆ.

ಬೈಕ್‌ನಲ್ಲಿ ಬಂದ ಇಬ್ಬರು ಹೆಲ್ಮೆಟ್ ಧಾರಿ ವ್ಯಕ್ತಿಗಳು ತಲವಾರಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಗಾಯಾಳು ಪ್ರಾಣಾಪಾಯದಿಂದ ಪಾರಾಗಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಕರಣದ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ದಕ್ಷಿಣ ಕನ್ನಡ ಎಸ್‌ಪಿ ಸಿ.ಎಚ್.ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಕೇಶವನ ಹಣೆಯಲ್ಲಿ ಆರು ಇಂಚು ಉದ್ದ ಹಾಗೂ ಅರ್ಧ ಇಂಚು ಆಳದ‌ ಗಾಯವಾಗಿದೆ. ಹೊಲಿಗೆ ಹಾಕಿದ್ದು, ಗಾಯಾಳು ಸುಧಾರಿಸಿಕೊಳ್ಳುತ್ತಿದ್ದಾನೆ ಎಂದು ಸುಧೀರ್ ಕುಮಾರ್ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT