ಹುಬ್ಬಳ್ಳಿ: ಮಹದಾಯಿ ಹೋರಾಟದ ಪ್ರತಿಭಟನೆ ತೀವ್ರಗೊಂಡಿದ್ದು ಇಲ್ಲಿನ ರೈಲು ನಿಲ್ದಾಣ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನಾದ ಕಾರ್ಯಕರ್ತರು ಬ್ಲೇಡಿನಿಂದ ಕೈ ಕೊಯ್ದುಕೊಂಡು ಆಕ್ರೋಶ ವ್ಯಕ್ತಪಡಿಸಿದರು.
ಧಾರವಾಡ ಜಿಲ್ಲಾ ಘಟಕದ ಯುವ ಸೇನೆಯ ಅಧ್ಯಕ್ಷ ವಿಜಯಕುಮಾರ್ ಸೇರಿದಂತೆ ಹಲವರು ಬ್ಲೇಡ್ನಿಂದ ಕೈಕೊಯ್ದುಕೊಂಡು ಪ್ರತಿಭಟನೆ ನಡೆಸಿದರು. ಕೂಡಲೇ ಪೊಲೀಸರು ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರು.