ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

900 ಅಡಿ ಆಳದ ಬಾವಿಯಲ್ಲಿ ಕಂಡಿದ್ದು ಕಿರೀಟವೇ?

Last Updated 27 ಡಿಸೆಂಬರ್ 2017, 7:27 IST
ಅಕ್ಷರ ಗಾತ್ರ

ಮಾಲೂರು: ತಾಲ್ಲೂಕಿನ ತೊರಹಳ್ಳಿಯ ರೈತ ವೆಂಕಟರಮಣಪ್ಪ ಅವರ ಜಮೀನಿನಲ್ಲಿ ಇರುವ ಬತ್ತಿರುವ 900 ಅಡಿ ಆಳದ ಕೊಳವೆ ಬಾವಿಯಲ್ಲಿ ಮಂಗಳವಾರ ಕಿರೀಟದ ಮಾದರಿಯ ಲೋಹದ ವಸ್ತು ಗೋಚರವಾಗಿದೆ. ಗ್ರಾಮಸ್ಥರ‌ಲ್ಲಿ ಇದು ಕುತೂಹಲಕ್ಕೆ ಕಾರಣವಾಗಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇತ್ತೀಚೆಗೆ ಸುರಿದ ಮಳೆಯಿಂದ ಅಂತರ್ಜಲ ವೃದ್ಧಿಯಾಗಿದೆ. ಕೊಳವೆ ಬಾವಿಗೂ ನೀರು ಬಂದಿರಬಹುದು ಎನ್ನುವ ನಂಬಿಕೆಯಲ್ಲಿ ಸ್ಕ್ಯಾನಿಂಗ್ ತಂತ್ರಜ್ಞಾನದ ಮೂಲಕ ವೆಂಕಟರವಣಪ್ಪ ನೀರಿನ ಮಟ್ಟ ಪರೀಕ್ಷಿಸಲು ಮುಂದಾಗಿದ್ದರು. ಸ್ಕ್ಯಾನಿಂಗ್‌ನಲ್ಲಿ ಈ ಲೋಹ ಗೋಚರಿಸಿದೆ.

ಈ ಬಗ್ಗೆ ಕಂದಾಯ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇವೆ. ಸ್ಕ್ಯಾನಿಂಗ್ ಚಿತ್ರಣ ವೀಕ್ಷಿಸಲಾಗುವುದು. ಒಂದು ವೇಳೆ ಇದು ಚಿನ್ನದ ಕಿರೀಟ ಎನ್ನುವುದು ದೃಢವಾದರೆ ಪುರಾತತ್ವ ಇಲಾಖೆಗೆ ಮಾಹಿತಿ ನೀಡುತ್ತೇವೆ ಎಂದು ತಹಶೀಲ್ದಾರ್ ಗಿರೀಶ್ ‘ಪ್ರಜಾವಾಣಿ’ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT