ವಕೀಲ ಪುಟ್ಟಪ್ಪ ಕಲ್ಯಾಣ ಮಾತನಾಡಿ, ಬಾಲ್ಯ ವಿವಾಹ, ಅನಕ್ಷರತೆ, ವರದಕ್ಷಿಣೆ, ಭ್ರೂಣ ಹತ್ಯೆ ಸೇರಿದಂತೆ ಹಲವು ಅನಿಷ್ಟ ಪದ್ಧತಿಯಿಂದ ಹೆಣ್ಣು ಶಿಶುಗಳ ಪ್ರಮಾಣ ಕಡಿಮೆಯಾಗಲು ಕಾರಣವಾಗಿದೆ. ಮಹಿಳೆಯರು ಎಚ್ಚೆತ್ತುಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಅಂಥಹ ಅನಿಷ್ಟ ಪದ್ದತಿಗಳ ವಿರೋಧ ಹೋರಾಡುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.