ಕರ್ನಾಟಕದಲ್ಲಿ ಗೋಹತ್ಯಾ ನಿಷೇಧ ಕಾನೂನು ಜಾರಿಯಾಗಬೇಕು. ಗೋ ತಳಿಗಳ ಸಂವರ್ಧನೆಗೆ ಬೇಕಾದ ಎಲ್ಲ ಉಪಕ್ರಮಗಳನ್ನು ಕೈಗೊಳ್ಳಬೇಕು. ಇದನ್ನು ಮಾನ್ಯಮಾಡಲೇ ಬೇಕು ಎಂದು ಭಾರತೀಯ ಪ್ರಜೆಯಾಗಿ ಆಗ್ರಹಿಸುತ್ತೇನೆ ಎಂದು ಬರೆದಿರುವ ಅರ್ಜಿಯ ತಳಭಾಗದಲ್ಲಿ ನಮೂದಿಸಿರುವ ಸ್ಥಳದಲ್ಲಿ ವ್ಯಕ್ತಿಯ ಸಹಿ, ಹೆಸರು, ವಿಳಾಸವನ್ನು ಪೋಷಕರಿಂದ ತುಂಬಿಸಿಕೊಂಡು ಬರುವಂತೆ ವಿದ್ಯಾರ್ಥಿಗಳಿಗೆ ಸೂಚಿಸಲಾಗಿತ್ತು.