ಬುಧವಾರ ನಡೆಯಲಿರುವ ಉತ್ತರ ಕರ್ನಾಟಕ ಬಂದ್ ಕುರಿತಂತೆ ಇಲ್ಲಿನ ಸರ್ಕಿಟ್ ಹೌಸ್ನಲ್ಲಿ ಮಂಗಳವಾರ ಚರ್ಚಿಸಿದ ಮುಖಂಡರಾದ ಲಕ್ಷ್ಮಣ ಬಕ್ಕಾಯಿ, ಸಲೀಂ ಸಂಗನಮಲ್ಲ, ‘ಈಗಾಗಲೇ ಹಲವಾರು ಬಾರಿ ಪ್ರತಿಭಟನೆ ಮಾಡುವ ಮೂಲಕ ಬಂದ್ ಮಾಡಲಾಗಿದೆ. ಆದರೂ ಈವರೆಗೆ ಎರಡೂ ಸರ್ಕಾರಗಳು ಸರಿಯಾಗಿ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಹೋರಾಟದ ತೀವ್ರತೆ ಹೆಚ್ಚಿಸಬೇಕಾಗಿದ್ದು, ಪ್ರತಿಯೊಬ್ಬರೂ ಬಂದ್ಗೆ ಸಂಪೂರ್ಣವಾಗಿ ಬೆಂಬಲಿಸಬೇಕು’ ಎಂದು ವಿವಿಧ ಸಂಘಟನೆಗಳಲ್ಲಿ ಮನವಿ ಮಾಡಿದರು.