ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮಗಳ ಮೂಲ ಸೌಲಭ್ಯಕ್ಕೆ ಮೊದಲು ಆದ್ಯತೆ: ಮಾಲೀಕಯ್ಯ

Last Updated 29 ಡಿಸೆಂಬರ್ 2017, 6:45 IST
ಅಕ್ಷರ ಗಾತ್ರ

ಅಫಜಲಪುರ: ತಾಲ್ಲೂಕಿನ ಗ್ರಾಮಗಳಲ್ಲಿ ಮೂಲಸೌಲಭ್ಯ ಕಲ್ಪಸಲು ಮೊದಲು ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಮಾಲೀಕಯ್ಯ ಗುತ್ತೇದಾರ ತಿಳಿಸಿದರು. ತಾಲ್ಲೂಕಿನ ದೇವಲಗಾಣಗಾಪುರದ ವಾರ್ಡ್‌ ನಂ. 5ರ ಲಕ್ಷ್ಮೀ ನಗರದಲ್ಲಿ ಸುಮಾರು ₹ 20 ಲಕ್ಷದ ಸಿಮೆಂಟ್‌ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಈಗಾಗಲೇ ತಾಲ್ಲೂಕಿನಲ್ಲಿ ಮುಖ್ಯರಸ್ತೆಗಳು ನಿರ್ಮಾಣ ಮಾಡಲಾಗಿದೆ. ಕೆಲವು ಕಡೆ ರಾಜ್ಯ– ರಾಷ್ಟ್ರೀಯ ಹೆದ್ದಾರಿ ನಿರ್ಮಿಸಲಾಗಿದೆ. ಕೆಲವು ಕಡೆ ಗ್ರಾಮಾಂತರದಲ್ಲಿಯೂ ಸಿಮೆಂಟ್‌ ರಸ್ತೆ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

ದೇವಲಗಾಣಗಾಪುರದ ದತ್ತ ದೇವಸ್ಥಾನಕ್ಕೆ ಬೇರೆ ರಾಜ್ಯಗಳಿಂದ ಯಾತ್ರಿಕರು ಬರುವುದರಿಂದ ಇಲ್ಲಿ ಹೆಚ್ಚಿನ ಸುಧಾರಣೆಗಳು ಅಗತ್ಯವಾಗಿವೆ. ಶುದ್ಧ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷ ಮಹೇಶ ಗುತ್ತೇದಾರ, ತಾ.ಪಂ ಸದಸ್ಯ ಭಗವಂತ ಜಕಬಾ, ಖಾದಿ ಗ್ರಾಮೋದ್ಯೋಗ ಮಂಡಳಿ ನಿರ್ದೇಶಕ ಮಲ್ಲಿನಾಥ ಪಾಟೀಲ ಹಾಗೂ ಮುಖಂಡರಾದ ದೇವೇಂದ್ರ ಜಮಾದಾರ, ಮಲ್ಲಿಕಾರ್ಜುನ ವಡಗೇರಿ, ಪಿಂಟು ಮನಿಯಾರ, ದಿಗಂಬರ ಕರಜಗಿ, ಅನ್ವರ್ ತಾಂಬೋಳಿ, ದತ್ತು ಸಿಂಧೆ, ಬಸವರಾಜ ಭಜಂತ್ರಿ, ಅರ್ಚಕರಾದ ಬಾಳುಭಟ್‌ ಪೂಜಾರಿ, ನರೇಂದ್ರ ಭಟ್‌ ಪೂಜಾರಿ, ಕರುಣಾಕರ ಭಟ್‌ ಪೂಜಾರಿ, ಪ್ರವೀಣ ಭಟ್‌ ಪೂಜಾರಿ, ಗುಂಡು ಭಟ್ ಪೂಜಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT