ಜ.14ರಂದು ಕೊಪ್ಪ ತಾಲ್ಲೂಕಿನ ಬಸ್ತಿ ಗ್ರಾಮದ ಸಮುದಾಯಭವನದಲ್ಲಿ ಸಂಜೆ 4 ಗಂಟೆಗೆ ಸಂಕ್ರಾಂತಿ ಸಂಭ್ರಮ ಆಯೋಜಿಸಲಾಗಿದೆ. ಸಹಕಾರಿ ಸಾರಿಗೆ ಸಂಸ್ಥೆ ಅಧ್ಯಕ್ಷ ಧರ್ಮಪ್ಪ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಜೈನ ಸಮುದಾಯದ ಮುಖಂಡ ಶಾಂತಕುಮಾರ್ ಜೈನ್ ಅಧ್ಯಕ್ಷತೆ ವಹಿಸುವರು ಎಂದು ಕನ್ನಡ ಜಾನಪದ ಪರಿಷತ್ ಜಿಲ್ಲಾಘಟಕದ ಅಧ್ಯಕ್ಷ ಸೂರಿ ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.