ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಕೊಟಗಿ, ‘1978ರಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಹಲವಾರು ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಹುಬ್ಬಳ್ಳಿ ಧಾರವಾಡ ಪಶ್ಚಿಮ ಮತಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಟಿಕೆಟ್ ದೊರೆಯುವ ಭರವಸೆ ಇದೆ’ ಎಂದು ಹೇಳಿದರು. ವಸಂತ ಅರ್ಕಾಚಾರ, ಮುತ್ತುರಾಜ ಮಾಕಡವಾಲೆ, ಮೋಹನ ಹೊಸಮನಿ, ಸಿ.ಪಿ. ನಾರಾಯಣಕರ ಇದ್ದರು.