ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದಾಯಿ ಯೋಜನೆ ಜಾರಿಗೆ ಆಗ್ರಹ: ಕೊಣ್ಣೂರಿನಲ್ಲಿ ಹೆದ್ದಾರಿ ತಡೆ

Last Updated 29 ಡಿಸೆಂಬರ್ 2017, 9:35 IST
ಅಕ್ಷರ ಗಾತ್ರ

ನರಗುಂದ: ಮಹದಾಯಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ತಾಲ್ಲೂಕಿನ ಕೊಣ್ಣೂರಿನಲ್ಲಿ ವಿರಕ್ತಮಠದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ರೈತರು ಹಾಗೂ ಆಟೋ, ಟೆಂಪೂ ಚಾಲಕರು, ಮಾಲೀಕರು ಗುರುವಾರ ಹುಬ್ಬಳ್ಳಿ–ವಿಜಯಪುರ ರಾಷ್ಟ್ರೀಯ ಹೆದ್ದಾರಿ ತಡೆ ಮಾಡಿ, ಪ್ರತಿಭಟನೆ ನಡೆಸಿದರು.

ಕೆಲ ಕಾಲ ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು. ಪ್ರಯಾಣಿಕರು ಪರದಾಡಿದರು. ರೈತರಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಕೇಂದ್ರ, ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ ಖಂಡಿಸಿ ಘೋಷಣೆ ಕೂಗಿದರು. ‘ಮಹದಾಯಿ ಯೋಜನೆ ಜಾರಿಗೊಳ್ಳುವವರೆಗೂ ಹೋರಾಟ ಬಿಡುವುದಿಲ್ಲ’ ಎಂದು ಪ್ರತಿಭಟನಾಕಾರರು ಹೇಳಿದರು.

‘ಮಹದಾಯಿಗಾಗಿ ಉಗ್ರ ಹೋರಾಟ ಕೈಗೊಳ್ಳಬೇಕು. ಚುನಾವಣೆಗಳನ್ನು ಬಹಿಷ್ಕರಿಸಿ, ಈ ಭಾಗದ ಜನಪ್ರತಿನಿಧಿಗಳಿಗೆ ತಕ್ಕ ಪಾಠ ಕಲಿಸಬೇಕು’ ಎಂದು ಅಪ್ಪಣಗೌಡ ಅರ್ಭಣದ, ಶಿವಾನಂದ ಹೇಳಿದರು. ಮಂಜು ಕುರಿ, ಶಂಕ್ರಣ್ಣ ವಾಲಿ, ಮುತ್ತುಸ್ವಾಮಿ ಮಳಲಿ, ಆಟೋ, ಟೆಂಪೂ ಚಾಲಕರು, ಮಾಲೀಕರು, ರೈತರು, ಮಹಿಳೆಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT