ಕಳಸಾ–ಬಂಡೂರಿ ಯೋಜನೆ ಜಾರಿಯಾದರೆ ಉತ್ತರ ಕರ್ನಾಟಕದ ನೀರಿನ ಸಮಸ್ಯೆ ಪರಿಹಾರವಾಗಲಿದೆ. ಕುಡಿಯುವ ನೀರಿಗೆ ಆಗ್ರಹಿಸಿ ಐದು ಜಿಲ್ಲೆಯ ರೈತರು ಎರಡೂವರೆ ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದ ಸಮಸ್ಯೆ ಪರಿಹಾರವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಾಹಿತಿ ಮಳಲಿ ವಸಂತಕುಮಾರ್, ಸಂಘದ ಅಧ್ಯಕ್ಷ ಬಿ.ಎ.ಶಿವಶಂಕರ್, ಪ್ರಧಾನ ಕಾರ್ಯದರ್ಶಿ ಗುರುಶಂಕರ್, ಉಪಾಧ್ಯಕ್ಷ ಬಸವರಾಜು, ಸಂಘಟನಾ ಕಾರ್ಯದರ್ಶಿ ಸೋಗಳ್ಳಿ ತುಂಗಾ ಇದ್ದರು.