ಗುಳೇದಗುಡ್ಡ: ವಿಜಯಪುರದಲ್ಲಿ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಹತ್ಯೆ ಮಾಡಿದ ಆರೋಪಿಗಳನ್ನು ಗಲ್ಲುಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ, ಸ್ಥಳೀಯ ಮಾದಿಗ ಸಮಾಜದ ಸಂಘಟನಾಕಾರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಮೆರವಣಿಗೆ ಹೊಸ ಅಂಬಾಭವಾನಿ ಗುಡಿಯಿಂದ ಹೊರಟು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತಹಶೀಲ್ದಾ್ ಕಚೇರಿಗೆ ಬಂದು ರಾಜ್ಯಪಾಲರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಾಲ್ಲೂಕು ತಹಶೀಲ್ದಾರ್ ಎಸ್. ರವೀಚಂದ್ರ ಅವರಿಗೆ ಸಲ್ಲಿಸಿದರು.
ಮಾದಿಗ ಸಮಾಜದ ಮುಖಂಡ ರಡ್ಡಿ ಎಚ್. ನಡುವಿನಮನಿ ಮಾತನಾಡಿ, ದಲಿತ ಬಾಲಕಿಯ ಘಟನೆಗೆ ಕಾರಣವಾದ ಕಾಮುಕರನ್ನು ಗಲ್ಲುಶಿಕ್ಷೆಗೆ ಒಳಪಡಿಸಬೇಕು. ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ಕಾನೂನಿನ ನೆರವು ನೀಡಬೇಕು. ದಲಿತ ಸಂತ್ರಸ್ತ ಕುಟುಂಬಕ್ಕೆ ಸೂಕ್ತ ರಕ್ಷಣೆ ಮತ್ತು ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.