ಧಾರವಾಡ: ರೈತರಿಗೆ ನೀಡಿದ ಆಶ್ವಾಸನೆ ಹುಸಿಗೊಳಿಸಿದ ರಾಜಕೀಯ ಪಕ್ಷಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ರೈತ ಸೇನಾ ಕರ್ನಾಟಕ ಸಂಘಟನೆಯ ಮುಖಂಡರು ಕರ್ನಾಟಕ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದು ಕೋರಿದ್ದಾರೆ. ಸಂಘಟನೆಯ ಶಂಕರಪ್ಪ ಅಂಬಲಿ, ವೀರೇಶ ಸೊಬರದಮಠ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿರೋಧಪಕ್ಷದ ನಾಯಕ ಜಗದೀಶ ಶೆಟ್ಟರ್ ಅವರಿಗೂ ಪತ್ರ ಬರೆದಿದ್ದಾರೆ.