‘ನಾವು ಆರು ಜನರು ಈ ಸಭೆಗೆ ಬರುವುದಾಗಿ ಒಪ್ಪಿಕೊಂಡಿದ್ದೆವು. ತಕ್ಕ ಉತ್ತರ ಕೊಡಲು ಸಿದ್ಧರಾಗಿದ್ದೆವು. ಆದರೆ, ಪೊಲೀಸ್ ಇಲಾಖೆಯಿಂದ ಈ ಸಭೆಗೆ ಪರವಾನಗಿ ಪಡೆಯಲು ಸಾಧ್ಯವಾಗಿಲ್ಲ ಎಂದರೆ ಅದು ಅವರ ದೌರ್ಬಲ್ಯ ಮತ್ತು ಅಸಹಾಯಕತೆಯನ್ನು ಸೂಚಿಸುತ್ತದೆ’ ಎಂದು ಪರೋಕ್ಷವಾಗಿ ತೋಂಟದಾರ್ಯ ಮಠದ ಸಿದ್ಧಲಿಂಗ ಸ್ವಾಮೀಜಿ, ಸಚಿವ ಎಂ.ಬಿ. ಪಾಟೀಲ, ವಿನಯ ಕುಲಕರ್ಣಿ ಮತ್ತು ಬಸವರಾಜ ಹೊರಟ್ಟಿ ಅವರನ್ನು ಟೀಕಿಸಿದರು.