ಶ್ರವಣಬೆಳಗೊಳ: ಮಹಾ ಮಸ್ತಕಾಭಿಷೇಕದಲ್ಲಿ ಪಾಲ್ಗೊಳ್ಳುವ ಭಕ್ತರು ಪ್ರಸಾದ ಸ್ವೀಕರಿಸಿ ತೃಪ್ತಿಯಾದರೆ ಬಾಹುಬಲಿ ಮಹೋತ್ಸವ ಯಶಸ್ವಿಯಾದಂತೆ ಎಂದು ಕ್ಷೇತ್ರದ ಪೀಠಾಧಿಪತಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಗುರುವಾರ ತಿಳಿಸಿದರು.
ಪಟ್ಟಣದ ವಿಂಧ್ಯಗಿರಿಯ ಬಾಹುಬಲಿ ಬೆಟ್ಟದ ಮುಂಭಾಗದಲ್ಲಿ ಬಾಗಲಕೋಟೆ ಮತ್ತು ಬೆಳಗಾಂ ಜಿಲ್ಲೆಯ ಕೃಷ್ಣಾ ನದಿ ದಂಡೆಯ ಜೈನ ಸಮಾಜದ ಶ್ರಾವಕರು ಸಂಗ್ರಹಿಸಿ ತಂದಿದ್ದ ಆಹಾರ ಪದಾರ್ಥಗಳ 7 ಲಾರಿಗಳನ್ನು ಸ್ವಾಗತಿಸಿ ಮಾತನಾಡಿದರು.
ಅನ್ನದಾನ ಶ್ರೇಷ್ಠವಾದುದು. ಅಂತಹ ಕಾರ್ಯದಲ್ಲಿ ಜೈನ ಸಮಾಜದ ಶ್ರಾವಕರು ಕೈಜೋಡಿಸಿರುವುದು ಅತ್ಯಂತ ಸಂತೋಷಕರವಾಗಿದೆ ಎಂದು ಶ್ಲಾಘಿಸಿದರು.