ರೈತರು ಅಧಿಕಾರಿಗಳೊಂದಿಗೆ ಸಹಕರಿಸಬೇಕು. ಅಧಿಕಾರಿಗಳು ಸಹ ರೈತರೊಂದಿಗೆ ಸೌಹಾರ್ದಯುತವಾಗಿ ವರ್ತಿಸಬೇಕು. ಯಾವುದೇ ಗೊಂದಲಕ್ಕೆ ಆಸ್ಪದ ಕೊಡದೆ ತೊಗರಿ ಖರೀದಿ ಕೇಂದ್ರ ಯಶಸ್ವಿಯಾಗಿ ಕೆಲಸ ನಿರ್ವಹಿಸಲು ಸರ್ವರೂ ಸಹಕರಿಸಬೇಕು ಎಂದರು. ಎಪಿಎಂಸಿ ಅಧ್ಯಕ್ಷ ಮಹಾದೇವ ದೈಗೊಂಡ, ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಪರಗೌಡ ಬಿರಾದಾರಪಾಟೀಲ, ಚನ್ನಮಲ್ಲಪ್ಪ ನ್ಯಾಮಗೌಡ, ಮಲ್ಲೇಶ ಸಾವಳಗಿ, ತಹಶೀಲ್ದಾರ್ ಪ್ರಶಾಂತ ಚನಗೊಂಡ ವೇದಿಕೆಯಲ್ಲಿದ್ದರು.