ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗಮಿಸಲಿದ್ದಾರೆ. ಜೊತೆಗೆ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ವಿಶ್ವನಾಥ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಅಲ್ಕೋಡು ಹನುಮಂತಪ್ಪ, ಶಾಸಕ ಎನ್.ಎಚ್.ಕೋನರೆಡ್ಡಿ ಸೇರಿದಂತೆ ಅನೇಕರು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.