ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ವಿದ್ಯಾ ಸಂಸ್ಥೆ ಸ್ಥಾಪನೆಯಾಗಿದ್ದು ಸ್ವಾತಂತ್ರ್ಯ ಪೂರ್ವದಲ್ಲಿ. ಸಿರಿಗೆರೆಯ ಶಾಲೆಯಲ್ಲಿ ಓದಿದ ಮಕ್ಕಳು ಅಂದು ಸೇವಾದಳದಲ್ಲಿ ಭಾಗವಹಿಸಿ ರಾಜ್ಯಕ್ಕೆ ಕೀರ್ತಿ ತಂದಿರುತ್ತಾರೆ. ಇಂದಿನ ಮಕ್ಕಳ ಮಲ್ಲಕಂಬ, ಮಲ್ಲಿಹಗ್ಗವು ಇತಿಹಾಸವನ್ನೇ ಸೃಷ್ಠಿಸಿದೆ. 28 ಸ್ಥಳಗಳಲ್ಲಿ ಪ್ರದರ್ಶನ ನೀಡಿ ದಾಖಲೆ ಬರೆದಿದೆ. ಚೆನ್ನೈ, ಉತ್ತರ ಪ್ರದೇಶದಲ್ಲಿ ನಡೆಯುವ ಕ್ರೀಡೆಗಳಿಗೆ ಹಾಗೂ ರಾಷ್ಟ್ರಮಟ್ಟಕ್ಕೆ ನಮ್ಮ ಶಾಲಾ–ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ’ ಎದು ಹೇಳಿದರು.