‘ಗುರುವಾರ ಬೆಂಗಳೂರಿನಲ್ಲಿ ನಡೆದ ಪರಿಷತ್ತಿನ ರಾಜ್ಯ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ರಾಜಕೀಯ ಪಕ್ಷಗಳ ಬಗ್ಗೆ ಅಸಮಾಧಾನ ಹೊಂದಿರುವ, ದೇಶದ ಬದಲಾವಣೆಗೆ ಆಸಕ್ತಿ ಹೊಂದಿರುವವರು ಜ.15ರೊಳಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳ ಆಯ್ಕೆಗೆ ಮೂರು ಜನರ ಸಮಿತಿ ರಚಿಸಲಾಗಿದೆ. ಸಲ್ಲಿಕೆಯಾದ ಅರ್ಜಿ ಪರಾಮರ್ಶಿಸುವ ತಂಡ, ಅಭ್ಯರ್ಥಿಯ ಹಿನ್ನೆಲೆ ಹಾಗೂ ಸಮಗ್ರ ಮಾಹಿತಿ ತಿಳಿದು ಒಪ್ಪಿಗೆ ನೀಡಿದರೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಲಾಗುವುದು’ ಎಂದು ತಿಳಿಸಿದರು.