ಶನಿವಾರ ಎಂಜಿನಿಯಯರ್ಗಳ ಸಭೆ ನಡೆಸಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ‘ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳ್ಳಬೇಕಾದ ಕಾಮಗಾರಿಗಳು ಇನ್ನೂ ಪೂರ್ಣವಾಗಿಲ್ಲ ಏಕೆ’ ಎಂದು ಪ್ರಶ್ನಿಸಿದರು. ಕೆಲವರು ಕಾಮಗಾರಿಗಳು ಗುತ್ತಿಗೆದಾರರ ಕಾರಣದಿಂದ ವಿಳಂಬವಾಗುತ್ತಿದೆ ಎಂದು ಕೆಲವು ಎಂಜಿನಿಯರ್ಗಳು ಉತ್ತರಿಸಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಯಾರೂ ಸಹ ಸರ್ಕಾರಕ್ಕಿಂತ ದೊಡ್ಡವರಲ್ಲ. ಗುತ್ತಿಗೆದಾರರು ವಿಳಂಬ ಮಾಡುತ್ತಾರೆ ಎನ್ನುವ ನೀವು ಎಷ್ಟು ಮಂದಿಯನ್ನು ಕಪ್ಪು ಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡಿದ್ದೀರ? ಗುತ್ತಿಗೆದಾರರು ಯಾರೇ ಇರಲಿ. ತಪ್ಪು ಮಾಡಿದಾಗ ಕಪ್ಪು ಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡಿ’ ಎಂದರು.