ಹಾವೇರಿ ನಗದಲ್ಲಿ ನಡೆದಿದೆ ಎನ್ನಲಾದ ಕಳಪೆ ಕಾಮಗಾರಿ, ಬೋಗಸ್ ಖಾತೆ, ಮಳಿಗೆ ಬಾಡಿಗೆ, ಅತಿಕ್ರಮಣ ಮತ್ತಿತರ ಅವ್ಯವಹಾರಗಳ ಬಗ್ಗೆ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ. ಅವರು ಪೌರಾಯುಕ್ತರಿಂದ ವರದಿ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಐವರು ಸಿಬ್ಬಂದಿ ವಿರುದ್ಧ ಜಿಲ್ಲಾಧಿಕಾರಿ ಶಿಸ್ತುಕ್ರಮ ಕೈಗೊಂಡಿದ್ದಾರೆ.