ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋ ಸಂರಕ್ಷಣೆಯ ಸಂದೇಶ ವನ್ನು ದೇಶಕ್ಕೆ ಸಾರುವಲ್ಲಿ ಅಭಯ ಗೋ ಯಾತ್ರೆ ಮಹತ್ವದ್ದಾಗಿದೆ. ಯಾತ್ರೆಯಲ್ಲಿ 3 ರಥಗಳು ಇದ್ದು. ಕುಶಾಲನಗರದಲ್ಲಿ ಭವ್ಯ ಸ್ವಾಗತ ಕೋರಲಾಗುವುದು. ನಂತರ ಸುಂಟಿಕೊಪ್ಪ, ಮಡಿಕೇರಿ, ವೀರಾಜಪೇಟೆ, ಗೋಣಿಕೊಪ್ಪ, ಚೆಯ್ಯಂಡಾಣೆ, ನೆಲ್ಯಹುದಿಕೇರಿ ಮೂಲಕ ರಥಯಾತ್ರೆ ಸಂಚರಿಸಿ ಸಂಪಾಜೆ ಮೂಲಕ ದಕ್ಷಿಣ ಕನ್ನಡ ಪ್ರವೇಶಿಸಲಿದೆ ಎಂದು ಮಾಹಿತಿ ನೀಡಿದರು.