<p><strong>ಸಂಡೂರು</strong>: ತಾಲ್ಲೂಕಿನ ಬಂಡ್ರಿ ದೊಡ್ಡ ಕೆರೆ ಎರಡು ವರ್ಷದ ಬಳಿಕ ಮತ್ತೆ ಮೈದುಂಬಿದೆ.</p>.<p>2015ರ ಸೆಪ್ಟೆಂಬರ್ನಲ್ಲಿ ಅಪಾರ ಮಳೆಯಿಂದಾಗಿ ಕೆರೆಯ ಒಂದು ಭಾಗ ಒಡೆದು ನೀರು ಪೋಲಾಗಿ ಸುತ್ತಮುತ್ತಲಿನ ಪ್ರದೇಶದ ಬೆಳೆ ನಷ್ಟಕ್ಕೂ ದಾರಿ ಮಾಡಿತ್ತು. ದುರಸ್ತಿಯ ನಂತರ ಬಿದ್ದ ಉತ್ತಮ ಮಳೆಯಿಂದಾಗಿ ಕೆರೆಯು ಮೈದುಂಬಿಕೊಂಡು ನೋಡುಗರನ್ನು ಆಕರ್ಷಿಸುತ್ತಿದೆ. ಗ್ರಾಮಸ್ಥರಲ್ಲೂ ಹರ್ಷವನ್ನುಂಟು ಮಾಡಿದೆ.</p>.<p>ಜಿಲ್ಲಾ ಪಂಚಾಯಿತಿಗೆ ಸೇರಿದ ಕೆರೆಯನ್ನು ಲೋಕೋಪಯೋಗಿ ಇಲಾಖೆಯ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರ 2016–17ನೇ ಸಾಲಿನ ವಿಶೇಷ ಅನುದಾನ ಸೇರಿ ಒಟ್ಟು ₹1.75 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗಿದೆ. ಒಡೆದ ಭಾಗವನ್ನಲ್ಲದೆ, ಕೆರೆಯ ಏರಿ, ತೂಬು, ಕೋಡಿಯನ್ನು ಕೂಡ ಅಭಿವೃದ್ಧಿ ಪಡಿಸಲಾಗಿದೆ.</p>.<p><strong>ಅಂತರ್ಜಲ ಹೆಚ್ಚಳ: </strong>ಹೆಚ್ಚಿನ ನೀರು ಸಂಗ್ರಹವಾಗಿರುವುದರಿಂದ ಕೆರೆಯ ಸುತ್ತಲಿನ ಬಂಡ್ರಿ, ಕೋಡಳ್ಳಿ, ಗೊಲ್ಲರಹಟ್ಟಿ ಮುಂತಾದ ಭಾಗಗಳಲ್ಲಿ ಬೇಸಿಗೆಯಲ್ಲಿ ಸ್ಥಗಿತಗೊಂಡಿದ್ದ ಕೊಳವೆ ಬಾವಿಗಳೆಲ್ಲಾ ಈಗ ಮರುಪೂರಣಗೊಂಡಿವೆ.</p>.<p>‘ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದು, ಈ ಭಾಗದಲ್ಲಿ ನೀರಿನ ತೊಂದರೆ ತಪ್ಪಿದೆ’ ಎಂದು ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಹಾಗೂ ಬಂಡ್ರಿ ಗ್ರಾಮಸ್ಥ ಹನುಮಂತಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>ಮೀನುಗಾರಿಕೆಗೂ ಅನುಕೂಲ: </strong>ಕೆರೆಯಲ್ಲಿ ನೀರು ತುಂಬಿರುವುದು ಮೀನುಗಾರಿಕೆಗೂ ಅನುಕೂಲವಾಗಿದೆ. ಇಲ್ಲಿ ಮೀನುಗಾರಿಕೆ ನಡೆಸಲು ವಾರ್ಷಿಕ ₹3.01 ಲಕ್ಷಕ್ಕೆ ಗುತ್ತಿಗೆ ನೀಡಲಾಗಿದೆ.</p>.<p>‘ಕೃಷಿ ಮತ್ತು ದನಕರುಗಳಿಗೂ ಹೆಚ್ಚು ಅನುಕೂಲವಾಗಿದೆ’ ಎಂದು ಬಂಡ್ರಿ ಗ್ರಾಮ ಪಂಚಾಯ್ತಿ ಸದಸ್ಯ ಕೆ. ನಾಗರಾಜ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಡೂರು</strong>: ತಾಲ್ಲೂಕಿನ ಬಂಡ್ರಿ ದೊಡ್ಡ ಕೆರೆ ಎರಡು ವರ್ಷದ ಬಳಿಕ ಮತ್ತೆ ಮೈದುಂಬಿದೆ.</p>.<p>2015ರ ಸೆಪ್ಟೆಂಬರ್ನಲ್ಲಿ ಅಪಾರ ಮಳೆಯಿಂದಾಗಿ ಕೆರೆಯ ಒಂದು ಭಾಗ ಒಡೆದು ನೀರು ಪೋಲಾಗಿ ಸುತ್ತಮುತ್ತಲಿನ ಪ್ರದೇಶದ ಬೆಳೆ ನಷ್ಟಕ್ಕೂ ದಾರಿ ಮಾಡಿತ್ತು. ದುರಸ್ತಿಯ ನಂತರ ಬಿದ್ದ ಉತ್ತಮ ಮಳೆಯಿಂದಾಗಿ ಕೆರೆಯು ಮೈದುಂಬಿಕೊಂಡು ನೋಡುಗರನ್ನು ಆಕರ್ಷಿಸುತ್ತಿದೆ. ಗ್ರಾಮಸ್ಥರಲ್ಲೂ ಹರ್ಷವನ್ನುಂಟು ಮಾಡಿದೆ.</p>.<p>ಜಿಲ್ಲಾ ಪಂಚಾಯಿತಿಗೆ ಸೇರಿದ ಕೆರೆಯನ್ನು ಲೋಕೋಪಯೋಗಿ ಇಲಾಖೆಯ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರ 2016–17ನೇ ಸಾಲಿನ ವಿಶೇಷ ಅನುದಾನ ಸೇರಿ ಒಟ್ಟು ₹1.75 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗಿದೆ. ಒಡೆದ ಭಾಗವನ್ನಲ್ಲದೆ, ಕೆರೆಯ ಏರಿ, ತೂಬು, ಕೋಡಿಯನ್ನು ಕೂಡ ಅಭಿವೃದ್ಧಿ ಪಡಿಸಲಾಗಿದೆ.</p>.<p><strong>ಅಂತರ್ಜಲ ಹೆಚ್ಚಳ: </strong>ಹೆಚ್ಚಿನ ನೀರು ಸಂಗ್ರಹವಾಗಿರುವುದರಿಂದ ಕೆರೆಯ ಸುತ್ತಲಿನ ಬಂಡ್ರಿ, ಕೋಡಳ್ಳಿ, ಗೊಲ್ಲರಹಟ್ಟಿ ಮುಂತಾದ ಭಾಗಗಳಲ್ಲಿ ಬೇಸಿಗೆಯಲ್ಲಿ ಸ್ಥಗಿತಗೊಂಡಿದ್ದ ಕೊಳವೆ ಬಾವಿಗಳೆಲ್ಲಾ ಈಗ ಮರುಪೂರಣಗೊಂಡಿವೆ.</p>.<p>‘ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದು, ಈ ಭಾಗದಲ್ಲಿ ನೀರಿನ ತೊಂದರೆ ತಪ್ಪಿದೆ’ ಎಂದು ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಹಾಗೂ ಬಂಡ್ರಿ ಗ್ರಾಮಸ್ಥ ಹನುಮಂತಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>ಮೀನುಗಾರಿಕೆಗೂ ಅನುಕೂಲ: </strong>ಕೆರೆಯಲ್ಲಿ ನೀರು ತುಂಬಿರುವುದು ಮೀನುಗಾರಿಕೆಗೂ ಅನುಕೂಲವಾಗಿದೆ. ಇಲ್ಲಿ ಮೀನುಗಾರಿಕೆ ನಡೆಸಲು ವಾರ್ಷಿಕ ₹3.01 ಲಕ್ಷಕ್ಕೆ ಗುತ್ತಿಗೆ ನೀಡಲಾಗಿದೆ.</p>.<p>‘ಕೃಷಿ ಮತ್ತು ದನಕರುಗಳಿಗೂ ಹೆಚ್ಚು ಅನುಕೂಲವಾಗಿದೆ’ ಎಂದು ಬಂಡ್ರಿ ಗ್ರಾಮ ಪಂಚಾಯ್ತಿ ಸದಸ್ಯ ಕೆ. ನಾಗರಾಜ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>