ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ನೇಮಕಾತಿ ನಿಯಮ ಬದಲಾವಣೆಗೆ ವಿರೋಧ

Last Updated 1 ಜನವರಿ 2018, 6:12 IST
ಅಕ್ಷರ ಗಾತ್ರ

ಕಲಬುರ್ಗಿ: ‘ಹಿರಿಯ ಪ್ರಾಥಮಿಕ ಶಾಲೆಗಳ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಹೊಸ ತಿದ್ದುಪಡಿ ಮಾಡಲಾಗಿದ್ದು, ಇದರಿಂದ ಹೈದರಾಬಾದ್‌ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಅನ್ಯಾಯ ಆಗಲಿದೆ’ ಎಂದು ಹೈದರಾಬಾದ್‌ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ವೈಜನಾಥ ಪಾಟೀಲ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ–2ರಲ್ಲಿ ಶೇ 50 ಮತ್ತು ಪಶ್ನೆಪತ್ರಿಕೆ–3ರಲ್ಲಿ ಶೇ 60ರಷ್ಟು ಅಂಕ ಕಡ್ಡಾಯವಾಗಿ ಅಭ್ಯರ್ಥಿ ಪಡೆಯಬೇಕು ಎಂದು ಹೊಸ ನಿಯಮ ರೂಪಿಸಲಾಗಿದೆ. ಈ ಭಾಗದಲ್ಲಿ ಟಿಇಟಿ ಪಾಸಾದವರ ಸಂಖ್ಯೆ ಕಡಿಮೆ ಇದೆ. ಹೊಸ ಅರ್ಹತೆ ಅನ್ವಯ ಶೇ 10ರಿಂದ ಶೇ20ರಷ್ಟು ವಿದ್ಯಾರ್ಥಿಗಳು ಮಾತ್ರ ಅರ್ಹತೆ ಗಿಟ್ಟಿಸುವ ಸಾಧ್ಯತೆ ಇದೆ. ಇದರಿಂದ ಹುದ್ದೆಗಳು ಖಾಲಿ ಉಳಿಯಲಿವೆ’ ಎಂದು ಅವರು ತಿಳಿಸಿದ್ದಾರೆ.

‘3,966 ಹುದ್ದೆಗಳು ಹೈದರಾಬಾದ್ ಕರ್ನಾಟಕ ಭಾಗದವರಿಗೆ ಮೀಸಲಾಗಿವೆ. ಗಣಿತ ಮತ್ತು ವಿಜ್ಞಾನ ವಿಷಯಗಳ ಶಿಕ್ಷಕರ ಹುದ್ದೆಗಳು ಹೆಚ್ಚಾಗಿವೆ ಎಂಬ ಮಾಹಿತಿ ಅಧಿಸೂಚನೆಯಲ್ಲಿದೆ. ಈ ವಿಷಯಗಳಲ್ಲಿ ಟಿಇಟಿ ಪಾಸಾದವರ ಸಂಖ್ಯೆ ಕಡಿಮೆಯಿದ್ದು, ಹೊಸ ನಿಯಮ ನೇಮಕಾತಿಗೆ ತೊಡಕಾಗಲಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT