<p><strong>ಬಾಗೇಪಲ್ಲಿ:</strong> ‘ಬಲಿಜ ಸಮುದಾಯಕ್ಕೆ ಮೀಸಲಾತಿ ವಿಚಾರದಲ್ಲಿ ಆಗಿರುವ ಅನ್ಯಾಯವನ್ನು ಒಂದು ತಿಂಗಳಲ್ಲಿ ಸರಿಪಡಿಸಬೇಕು. ಇಲ್ಲದಿದ್ದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಬೇಕಾಗುತ್ತದೆ’ ಎಂದು ಹಿರಿಯ ವಕೀಲ ಸಿ.ಎಸ್.ದ್ವಾರಕಾನಾಥ್ ತಿಳಿಸಿದರು.</p>.<p>ಪಟ್ಟಣ ಹೊರವಲಯದಲ್ಲಿ ಕರ್ನಾಟಕ ಬಲಿಜ ಮಹಾಸಭಾ ಭಾನುವಾರ ಆಯೋಜಿಸಿದ್ದ ಬಲಿಜ ಸಮಾವೇಶದಲ್ಲಿ ಅವರು ಮಾತನಾಡಿದರು. ‘ಬಲಿಜ ಸಮುದಾಯಕ್ಕೆ ಶಿಕ್ಷಣ, ಉದ್ಯೋಗ ಹಾಗೂ ರಾಜಕೀಯ ಮೀಸಲಾತಿ ಹಿಂದಿನಿಂದಲೂ ಇತ್ತು. ಆದರೆ ಯಾವುದೇ ಕಾರಣವಿಲ್ಲದೆ 1994 ರಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರ ಈ ಸಮುದಾಯವನ್ನು ಪ್ರವರ್ಗ ‘2ಎ’ಯಿಂದ ‘3ಎ’ಗೆ ಸೇರಿಸಿತು. ಅಂದಿನಿಂದ ಬಲಿಜರು ಬಲಿಷ್ಠ ಸಮುದಾಯಗಳ ಜತೆ ಪೈಪೋಟಿ ಮಾಡದೆ ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕವಾಗಿ ಹಿಂದುಳಿಯುವಂತಾಯಿತು’ ಎಂದು ಹೇಳಿದರು.</p>.<p>‘ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಸಂಸದ ಪಿ.ಎಸ್.ಮೋಹನ್ ಅವರ ಹೋರಾಟದ ಫಲವಾಗಿ ಬಲಿಜಿಗರನ್ನು ಶೈಕ್ಷಣಿಕವಾಗಿ ‘2ಎ’ಗೆ ಸೇರಿಸಲಾಯಿತು. ಇದರಿಂದ ಅನುಕೂಲವಾಯಿತು. ಉದ್ಯೋಗ ಮೀಸಲಾತಿಯಲ್ಲೂ ಸಮುದಾಯವನ್ನು ‘2ಎ’ಗೆ ಸೇರಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಕಳೆದ ಮೇನಲ್ಲಿ ಬೆಂಗಳೂರಿನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಚರ್ಚಿಸಿ, ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಅದು ಇಂದಿಗೂ ಈಡೇರಿಸಿಲ್ಲ. ವಿಧಾನಸಭೆ ಚುನಾವಣೆ ಪ್ರಕ್ರಿಯೆ ಆರಂಭಗೊಳ್ಳುವ ಮುನ್ನ ಔದ್ಯೋಗಿಕ ಕ್ಷೇತ್ರದಲ್ಲಿ ಮೀಸಲಾತಿ ಘೋಷಣೆ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ಸಂಸದ, ಬಲಿಜ ಮಹಾಸಭಾ ರಾಜ್ಯ ಘಟಕದ ಅಧ್ಯಕ್ಷ ಪಿ.ಸಿ.ಮೋಹನ್ ಮಾತನಾಡಿ, ‘ಬಲಿಜರು 24 ವರ್ಷಗಳಿಂದ ಅನ್ಯಾಯ ಮತ್ತು ಶೋಷಣೆಗೆ ಒಳಗಾಗುತ್ತ ಬಂದಿದ್ದಾರೆ. ಈ ಅನ್ಯಾಯ ಸರಿಪಡಿಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿ ಏಳು ತಿಂಗಳಾದರೂ ಈವರೆಗೆ ಅವರು ಈ ವಿಚಾರದಲ್ಲಿ ಚಕಾರ ಎತ್ತುತ್ತಿಲ್ಲ. ಆದ್ದರಿಂದ ನಾವೆಲ್ಲ ಸಂಘಟಿತರಾಗಿ ಹೋರಾಟ ಮಾಡಬೇಕಾಗಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದರೆ 24 ಗಂಟೆ ಒಳಗೆ ಈ ಕೆಲಸ ಮಾಡುತ್ತಾರೆ’ ಎಂದರು.</p>.<p>ಬಲಿಜ ಮಹಾಸಭಾ ಪ್ರಧಾನ ಕಾರ್ಯದರ್ಶಿ ರಾಮಲಿಂಗಪ್ಪ ಮಾತನಾಡಿ, ‘ರಾಜ್ಯ ಸರ್ಕಾರ ಕಾಲಜ್ಞಾನಿ ಕೈವಾರ ತಾತಯ್ಯನವರ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲು ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ವಕೀಲ ಎ.ಜಿ. ಸುಧಾಕರ್, ಮುಖಂಡರಾದ ರಾಜಶೇಖರ ನಾಯ್ಡು, ಮಂಜುಳಾ ನಾಯ್ಡು, ನಿವೃತ್ತ ಪೊಲೀಸ್ ಅಧಿಕಾರಿ ಎಂ.ಸಿ. ಮೂರ್ತಿ, ಮುನಿರಾಜು, ಗುಡಿಬಂಡೆ ಬಾಲೆಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಕೈವಾರ ಶ್ರೀನಿವಾಸ್ ಉಪಸ್ಥಿತರಿದ್ದರು.</p>.<p>**</p>.<p>ಬಲಿಜ ಸಮುದಾಯದಲ್ಲಿಯೇ ಒಂದು ಗುಂಪು ಸಮುದಾಯದ ಒಗ್ಗಟ್ಟು ಹೊಡೆಯಲು ಹವಣಿಸುತ್ತಿದೆ. ನಾವೆಲ್ಲ ಸಂಘಟಿತರಾಗಿ ಅದಕ್ಕೆ ತಕ್ಕ ಪಾಠ ಕಲಿಸಬೇಕು.<br /> <em><strong>-ಪಿ.ಸಿ.ಮೋಹನ್, ಕರ್ನಾಟಕ ಬಲಿಜ ಮಹಾಸಭಾ ಅಧ್ಯಕ್ಷ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ:</strong> ‘ಬಲಿಜ ಸಮುದಾಯಕ್ಕೆ ಮೀಸಲಾತಿ ವಿಚಾರದಲ್ಲಿ ಆಗಿರುವ ಅನ್ಯಾಯವನ್ನು ಒಂದು ತಿಂಗಳಲ್ಲಿ ಸರಿಪಡಿಸಬೇಕು. ಇಲ್ಲದಿದ್ದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಬೇಕಾಗುತ್ತದೆ’ ಎಂದು ಹಿರಿಯ ವಕೀಲ ಸಿ.ಎಸ್.ದ್ವಾರಕಾನಾಥ್ ತಿಳಿಸಿದರು.</p>.<p>ಪಟ್ಟಣ ಹೊರವಲಯದಲ್ಲಿ ಕರ್ನಾಟಕ ಬಲಿಜ ಮಹಾಸಭಾ ಭಾನುವಾರ ಆಯೋಜಿಸಿದ್ದ ಬಲಿಜ ಸಮಾವೇಶದಲ್ಲಿ ಅವರು ಮಾತನಾಡಿದರು. ‘ಬಲಿಜ ಸಮುದಾಯಕ್ಕೆ ಶಿಕ್ಷಣ, ಉದ್ಯೋಗ ಹಾಗೂ ರಾಜಕೀಯ ಮೀಸಲಾತಿ ಹಿಂದಿನಿಂದಲೂ ಇತ್ತು. ಆದರೆ ಯಾವುದೇ ಕಾರಣವಿಲ್ಲದೆ 1994 ರಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರ ಈ ಸಮುದಾಯವನ್ನು ಪ್ರವರ್ಗ ‘2ಎ’ಯಿಂದ ‘3ಎ’ಗೆ ಸೇರಿಸಿತು. ಅಂದಿನಿಂದ ಬಲಿಜರು ಬಲಿಷ್ಠ ಸಮುದಾಯಗಳ ಜತೆ ಪೈಪೋಟಿ ಮಾಡದೆ ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕವಾಗಿ ಹಿಂದುಳಿಯುವಂತಾಯಿತು’ ಎಂದು ಹೇಳಿದರು.</p>.<p>‘ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಸಂಸದ ಪಿ.ಎಸ್.ಮೋಹನ್ ಅವರ ಹೋರಾಟದ ಫಲವಾಗಿ ಬಲಿಜಿಗರನ್ನು ಶೈಕ್ಷಣಿಕವಾಗಿ ‘2ಎ’ಗೆ ಸೇರಿಸಲಾಯಿತು. ಇದರಿಂದ ಅನುಕೂಲವಾಯಿತು. ಉದ್ಯೋಗ ಮೀಸಲಾತಿಯಲ್ಲೂ ಸಮುದಾಯವನ್ನು ‘2ಎ’ಗೆ ಸೇರಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಕಳೆದ ಮೇನಲ್ಲಿ ಬೆಂಗಳೂರಿನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಚರ್ಚಿಸಿ, ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಅದು ಇಂದಿಗೂ ಈಡೇರಿಸಿಲ್ಲ. ವಿಧಾನಸಭೆ ಚುನಾವಣೆ ಪ್ರಕ್ರಿಯೆ ಆರಂಭಗೊಳ್ಳುವ ಮುನ್ನ ಔದ್ಯೋಗಿಕ ಕ್ಷೇತ್ರದಲ್ಲಿ ಮೀಸಲಾತಿ ಘೋಷಣೆ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ಸಂಸದ, ಬಲಿಜ ಮಹಾಸಭಾ ರಾಜ್ಯ ಘಟಕದ ಅಧ್ಯಕ್ಷ ಪಿ.ಸಿ.ಮೋಹನ್ ಮಾತನಾಡಿ, ‘ಬಲಿಜರು 24 ವರ್ಷಗಳಿಂದ ಅನ್ಯಾಯ ಮತ್ತು ಶೋಷಣೆಗೆ ಒಳಗಾಗುತ್ತ ಬಂದಿದ್ದಾರೆ. ಈ ಅನ್ಯಾಯ ಸರಿಪಡಿಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿ ಏಳು ತಿಂಗಳಾದರೂ ಈವರೆಗೆ ಅವರು ಈ ವಿಚಾರದಲ್ಲಿ ಚಕಾರ ಎತ್ತುತ್ತಿಲ್ಲ. ಆದ್ದರಿಂದ ನಾವೆಲ್ಲ ಸಂಘಟಿತರಾಗಿ ಹೋರಾಟ ಮಾಡಬೇಕಾಗಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದರೆ 24 ಗಂಟೆ ಒಳಗೆ ಈ ಕೆಲಸ ಮಾಡುತ್ತಾರೆ’ ಎಂದರು.</p>.<p>ಬಲಿಜ ಮಹಾಸಭಾ ಪ್ರಧಾನ ಕಾರ್ಯದರ್ಶಿ ರಾಮಲಿಂಗಪ್ಪ ಮಾತನಾಡಿ, ‘ರಾಜ್ಯ ಸರ್ಕಾರ ಕಾಲಜ್ಞಾನಿ ಕೈವಾರ ತಾತಯ್ಯನವರ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲು ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ವಕೀಲ ಎ.ಜಿ. ಸುಧಾಕರ್, ಮುಖಂಡರಾದ ರಾಜಶೇಖರ ನಾಯ್ಡು, ಮಂಜುಳಾ ನಾಯ್ಡು, ನಿವೃತ್ತ ಪೊಲೀಸ್ ಅಧಿಕಾರಿ ಎಂ.ಸಿ. ಮೂರ್ತಿ, ಮುನಿರಾಜು, ಗುಡಿಬಂಡೆ ಬಾಲೆಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಕೈವಾರ ಶ್ರೀನಿವಾಸ್ ಉಪಸ್ಥಿತರಿದ್ದರು.</p>.<p>**</p>.<p>ಬಲಿಜ ಸಮುದಾಯದಲ್ಲಿಯೇ ಒಂದು ಗುಂಪು ಸಮುದಾಯದ ಒಗ್ಗಟ್ಟು ಹೊಡೆಯಲು ಹವಣಿಸುತ್ತಿದೆ. ನಾವೆಲ್ಲ ಸಂಘಟಿತರಾಗಿ ಅದಕ್ಕೆ ತಕ್ಕ ಪಾಠ ಕಲಿಸಬೇಕು.<br /> <em><strong>-ಪಿ.ಸಿ.ಮೋಹನ್, ಕರ್ನಾಟಕ ಬಲಿಜ ಮಹಾಸಭಾ ಅಧ್ಯಕ್ಷ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>