ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಘುರಾಮ್‌ರ ‘ಋತುಗಾನ’ ಕವನಸಂಕಲನ ಬಿಡುಗಡೆ

Last Updated 1 ಜನವರಿ 2018, 6:50 IST
ಅಕ್ಷರ ಗಾತ್ರ

ಚಿತ್ರದುರ್ಗ: ಬೆಂಗಳೂರಿನ ಕನ್ನಡ ಭವನದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದಿಂದ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ ಅಂಗವಾಗಿ ಈಚೆಗೆ ಹಮ್ಮಿಕೊಂಡಿದ್ದ 2016ನೇ ಸಾಲಿನ ಯುವ ಬರಹಗಾರರ ಚೊಚ್ಚಲ 37 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಯುವ ಬರಹಗಾರ ಜೋಡಿಚಿಕ್ಕೇನಹಳ್ಳಿ ಎಸ್.ರಘುರಾಮ್ ಅವರ ‘ಋತುಗಾನ’ ಕವನ ಸಂಕಲನ ಬಿಡುಗಡೆಯಾಯಿತು.

ಹಿರಿಯ ಸಾಹಿತಿ ಡಾ. ದೊಡ್ಡ ರಂಗೇಗೌಡ ಪುಸ್ತಕಗಳನ್ನು ಬಿಡುಗಡೆಗೊಳಿಸಿದರು. ಕಥೆಗಾರ ಡಾ.ಅಮರೇಶ್ ನುಗಡೋಣಿ ಅವರು ಕಥೆ ಹುಟ್ಟುವ ಹಾಗೂ ಕಥೆ ಕಟ್ಟುವಿಕೆಯ ಕುರಿತು ಮಾತನಾಡಿದರು.

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಅಧ್ಯಕ್ಷತೆ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT