ಚಿತ್ರದುರ್ಗ: ಬೆಂಗಳೂರಿನ ಕನ್ನಡ ಭವನದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದಿಂದ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ ಅಂಗವಾಗಿ ಈಚೆಗೆ ಹಮ್ಮಿಕೊಂಡಿದ್ದ 2016ನೇ ಸಾಲಿನ ಯುವ ಬರಹಗಾರರ ಚೊಚ್ಚಲ 37 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಯುವ ಬರಹಗಾರ ಜೋಡಿಚಿಕ್ಕೇನಹಳ್ಳಿ ಎಸ್.ರಘುರಾಮ್ ಅವರ ‘ಋತುಗಾನ’ ಕವನ ಸಂಕಲನ ಬಿಡುಗಡೆಯಾಯಿತು.