<p><strong>ಚಿತ್ರದುರ್ಗ: </strong>‘ಮುಂಬರುವ ಚುನಾವಣೆಯಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ನಿಂದ ಸ್ಪರ್ಧಿಸಲು ನಾನೂ ಟಿಕೆಟ್ ಆಕಾಂಕ್ಷಿ’ ಎಂದು ಮಾಜಿ ಶಾಸಕ ಎ.ವಿ.ಉಮಾಪತಿ ತಿಳಿಸಿದರು.</p>.<p>‘ಹೊಳಲ್ಕೆರೆ ವಿಧಾನಸಭಾ ಕ್ಷೇತ್ರವೂ ಮೀಸಲಾತಿ ಆದ ನಂತರ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದೆ ಎಂದ ಅವರು, ನನಗೆ ಈ ಕ್ಷೇತ್ರ ಹೊಸದಲ್ಲ’ ಎಂದು ಇಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಎರಡು ಬಾರಿ ಶಾಸಕನಾಗಿದ್ದೇನೆ. ಅಲ್ಲದೆ, ಎರಡೂ ಬಾರಿ ಸೋಲು ಅನುಭವಿಸಿದ್ದೇನೆ. ಉಮಾಪತಿ ಯಾರೆಂದು ಜಿಲ್ಲೆಯ ಜನರಿಗೆ ಗೊತ್ತಿದೆ. ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ನನಗೆ ಕಷ್ಟವೇನಲ್ಲ. ಚುನಾವಣೆಯಲ್ಲಿ ಜಾತಿಗಿಂತಲೂ ಜನಪ್ರಿಯತೆ ಅತ್ಯಂತ ಮುಖ್ಯ’ ಎಂದರು.</p>.<p>‘25 ವರ್ಷದಿಂದ ಕಾಂಗ್ರೆಸ್ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ನನಗೆ ರಾಜಕೀಯದಲ್ಲಿ ಸಾಕಷ್ಟು ಅನುಭವ ಇದೆ. ಅದೇ ರೀತಿ ಸ್ಪರ್ಧಿಸುವ ಆಕಾಂಕ್ಷಿಗಳೂ ಸಾಕಷ್ಟು ಮಂದಿ ಇದ್ದಾರೆ. ಅದರಲ್ಲಿ ನಾನೂ ಒಬ್ಬ’ ಎಂದು ತಿಳಿಸಿದರು.</p>.<p>‘ಈ ಬಾರಿ ಪಕ್ಷದ ಮುಖಂಡರಿಗೆ ಟಿಕೆಟ್ ನೀಡುವಂತೆ ಕೋರಿದ್ದೇನೆ. ಇಲ್ಲದಿದ್ದರೆ, ಯಾವ ಆಕಾಂಕ್ಷಿಗೆ ಪಕ್ಷದಿಂದ ಟಿಕೆಟ್ ಸಿಗುತ್ತದೋ ಅವರ ಗೆಲುವಿಗಾಗಿ ಕಾರ್ಯಕರ್ತನಾಗಿ ಶ್ರಮಿಸುತ್ತೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>‘ಮುಂಬರುವ ಚುನಾವಣೆಯಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ನಿಂದ ಸ್ಪರ್ಧಿಸಲು ನಾನೂ ಟಿಕೆಟ್ ಆಕಾಂಕ್ಷಿ’ ಎಂದು ಮಾಜಿ ಶಾಸಕ ಎ.ವಿ.ಉಮಾಪತಿ ತಿಳಿಸಿದರು.</p>.<p>‘ಹೊಳಲ್ಕೆರೆ ವಿಧಾನಸಭಾ ಕ್ಷೇತ್ರವೂ ಮೀಸಲಾತಿ ಆದ ನಂತರ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದೆ ಎಂದ ಅವರು, ನನಗೆ ಈ ಕ್ಷೇತ್ರ ಹೊಸದಲ್ಲ’ ಎಂದು ಇಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಎರಡು ಬಾರಿ ಶಾಸಕನಾಗಿದ್ದೇನೆ. ಅಲ್ಲದೆ, ಎರಡೂ ಬಾರಿ ಸೋಲು ಅನುಭವಿಸಿದ್ದೇನೆ. ಉಮಾಪತಿ ಯಾರೆಂದು ಜಿಲ್ಲೆಯ ಜನರಿಗೆ ಗೊತ್ತಿದೆ. ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ನನಗೆ ಕಷ್ಟವೇನಲ್ಲ. ಚುನಾವಣೆಯಲ್ಲಿ ಜಾತಿಗಿಂತಲೂ ಜನಪ್ರಿಯತೆ ಅತ್ಯಂತ ಮುಖ್ಯ’ ಎಂದರು.</p>.<p>‘25 ವರ್ಷದಿಂದ ಕಾಂಗ್ರೆಸ್ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ನನಗೆ ರಾಜಕೀಯದಲ್ಲಿ ಸಾಕಷ್ಟು ಅನುಭವ ಇದೆ. ಅದೇ ರೀತಿ ಸ್ಪರ್ಧಿಸುವ ಆಕಾಂಕ್ಷಿಗಳೂ ಸಾಕಷ್ಟು ಮಂದಿ ಇದ್ದಾರೆ. ಅದರಲ್ಲಿ ನಾನೂ ಒಬ್ಬ’ ಎಂದು ತಿಳಿಸಿದರು.</p>.<p>‘ಈ ಬಾರಿ ಪಕ್ಷದ ಮುಖಂಡರಿಗೆ ಟಿಕೆಟ್ ನೀಡುವಂತೆ ಕೋರಿದ್ದೇನೆ. ಇಲ್ಲದಿದ್ದರೆ, ಯಾವ ಆಕಾಂಕ್ಷಿಗೆ ಪಕ್ಷದಿಂದ ಟಿಕೆಟ್ ಸಿಗುತ್ತದೋ ಅವರ ಗೆಲುವಿಗಾಗಿ ಕಾರ್ಯಕರ್ತನಾಗಿ ಶ್ರಮಿಸುತ್ತೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>