<p><strong>ಕಲಬುರ್ಗಿ: ‘</strong>ಕೇಂದ್ರ ಮತ್ತು ರಾಜ್ಯ ಸರ್ಕಾರ ಸಮಾನವಾದ ಪಿಂಚಣಿ ನೀಡುವ ವ್ಯವಸ್ಥೆ ಜಾರಿ ಮಾಡಬೇಕು’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ಜಿಲ್ಲಾ ಘಟಕದ ಉಪಾಧ್ಯಕ್ಷ ಕಾಶಿನಾಥ ಬೀದರಕರ ಒತ್ತಾಯಿಸಿದರು.</p>.<p>ಇಲ್ಲಿನ ಜಿಲ್ಲಾ ನಿವೃತ್ತ ನೌಕರರ ಸಂಘದ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ನಿವೃತ್ತ ನೌಕರರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದೇಶದಲ್ಲಿ ಮಾಜಿ ಮತ್ತು ಹಾಲಿ ಸಂಸದ, ಶಾಸಕರಿಗೆ ಪಿಂಚಣಿ ನೀಡುವುದಕ್ಕೆ ಯಾವುದೇ ತರಹದ ತೊಂದರೆಗಳಿಲ್ಲ. ಆದರೆ ನಿವೃತ್ತ ನೌಕರರಿಗೆ ಔಷಧಿ, ಪಿಂಚಣಿ ನೀಡಲು ಇಂದಿನ ಸರ್ಕಾರ ಹಲವಾರು ಸಮಸ್ಯೆಗಳನ್ನು ಹೇಳುತ್ತದೆ. ಔಷಧ ಮತ್ತು ಸಮಾನವಾದ ಪಿಂಚಣಿ ವ್ಯವಸ್ಥೆ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಕೇಂದ್ರ ಸರ್ಕಾರದ 7ನೇ ವೇತನ ಆಯೋಗ ಜಾರಿಮಾಡಿದಂತೆ ರಾಜ್ಯ ಸರ್ಕಾರಕ್ಕೂ 7ನೇ ವೇತನ ಆಯೋಗ ಜಾರಿಗೆ ಮಾಡಬೇಕು. 25 ರಾಜ್ಯಗಳಲ್ಲಿ 7ನೇ ವೇತನ ಆಯೋಗ ಜಾರಿಯಾಗಿದೆ. ಅದರಂತೆ ನಮ್ಮ ರಾಜ್ಯದಲ್ಲೂ 7ನೇ ವೇತನ ಆಯೋಗ ಜಾರಿಗೆ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನಾ.ಸಿ.ಗಂಜಲಖೇಡ, ಉಪಾಧ್ಯಕ್ಷ ಎಸ್.ವಿ.ಮಠಪತಿ, ಮುಖಂಡರಾದ ನಾಗಣ್ಣ ಎಸ್.ಗಣಜಲಖೇಡ, ವೀರಣ್ಣ ಎಂ.ಪಡಶೆಟ್ಟಿ, ಕಾಶಪ್ಪ ವಾಂಜರಖೇಡ, ಆರ್.ಎಸ್.ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: ‘</strong>ಕೇಂದ್ರ ಮತ್ತು ರಾಜ್ಯ ಸರ್ಕಾರ ಸಮಾನವಾದ ಪಿಂಚಣಿ ನೀಡುವ ವ್ಯವಸ್ಥೆ ಜಾರಿ ಮಾಡಬೇಕು’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ಜಿಲ್ಲಾ ಘಟಕದ ಉಪಾಧ್ಯಕ್ಷ ಕಾಶಿನಾಥ ಬೀದರಕರ ಒತ್ತಾಯಿಸಿದರು.</p>.<p>ಇಲ್ಲಿನ ಜಿಲ್ಲಾ ನಿವೃತ್ತ ನೌಕರರ ಸಂಘದ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ನಿವೃತ್ತ ನೌಕರರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದೇಶದಲ್ಲಿ ಮಾಜಿ ಮತ್ತು ಹಾಲಿ ಸಂಸದ, ಶಾಸಕರಿಗೆ ಪಿಂಚಣಿ ನೀಡುವುದಕ್ಕೆ ಯಾವುದೇ ತರಹದ ತೊಂದರೆಗಳಿಲ್ಲ. ಆದರೆ ನಿವೃತ್ತ ನೌಕರರಿಗೆ ಔಷಧಿ, ಪಿಂಚಣಿ ನೀಡಲು ಇಂದಿನ ಸರ್ಕಾರ ಹಲವಾರು ಸಮಸ್ಯೆಗಳನ್ನು ಹೇಳುತ್ತದೆ. ಔಷಧ ಮತ್ತು ಸಮಾನವಾದ ಪಿಂಚಣಿ ವ್ಯವಸ್ಥೆ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಕೇಂದ್ರ ಸರ್ಕಾರದ 7ನೇ ವೇತನ ಆಯೋಗ ಜಾರಿಮಾಡಿದಂತೆ ರಾಜ್ಯ ಸರ್ಕಾರಕ್ಕೂ 7ನೇ ವೇತನ ಆಯೋಗ ಜಾರಿಗೆ ಮಾಡಬೇಕು. 25 ರಾಜ್ಯಗಳಲ್ಲಿ 7ನೇ ವೇತನ ಆಯೋಗ ಜಾರಿಯಾಗಿದೆ. ಅದರಂತೆ ನಮ್ಮ ರಾಜ್ಯದಲ್ಲೂ 7ನೇ ವೇತನ ಆಯೋಗ ಜಾರಿಗೆ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನಾ.ಸಿ.ಗಂಜಲಖೇಡ, ಉಪಾಧ್ಯಕ್ಷ ಎಸ್.ವಿ.ಮಠಪತಿ, ಮುಖಂಡರಾದ ನಾಗಣ್ಣ ಎಸ್.ಗಣಜಲಖೇಡ, ವೀರಣ್ಣ ಎಂ.ಪಡಶೆಟ್ಟಿ, ಕಾಶಪ್ಪ ವಾಂಜರಖೇಡ, ಆರ್.ಎಸ್.ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>