<p><strong>ನವದೆಹಲಿ:</strong> ಕಾಶ್ಮೀರದ ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘಿಸುವ ಪಾಕಿಸ್ತಾನದ ಜತೆ ಕ್ರಿಕೆಟ್ ಸರಣಿ ನಡೆಸುವುದು ಅಸಾಧ್ಯ ಎಂದು ವಿದೇಶಾಂಗ ವ್ಯವಹಾರ ಸಚಿವೆ ಸುಷ್ಮಾ ಸ್ವರಾಜ್ ಸೋಮವಾರ ತಿಳಿಸಿದ್ದಾರೆ.</p>.<p>ವಿದೇಶಾಂಗ ವ್ಯವಹಾರಗಳ ಸಮಾಲೋಚನಾ ಸಮಿತಿ ಸಭೆಯಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಗಡಿಯಲ್ಲಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿ ಭಾರತೀಯ ಯೋಧರನ್ನು ಹತ್ಯೆ ಮಾಡುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಕ್ರಿಕೆಟ್ ಸರಣಿ ನಡೆಸುವುದು ಸೂಕ್ತವಲ್ಲ. ಪಾಕಿಸ್ತಾನ ಭಯೋತ್ಪಾದನೆಗೆ ಅಂತ್ಯ ಹಾಡುವವರೆಗೂ ಆ ದೇಶದೊಂದಿಗೆ ಕ್ರಿಕೆಟ್ ಸರಣಿ ನಡೆಯದು ಎಂದು ಸುಷ್ಮಾ ಸ್ವರಾಜ್ ಅಭಿಪ್ರಾಯಪಟ್ಟಿದ್ದಾರೆ.</p>.<p>‘70 ವರ್ಷ ವಯಸ್ಸು ಮೀರಿದವರು, ಮಹಿಳೆಯರು ಮತ್ತು ಅನಾರೋಗ್ಯದಿಂದ ಬಳಲುತ್ತಿರುವ ಕೈದಿಗಳನ್ನು ಬಿಡುಗಡೆ ಮಾಡಲು ಪಾಕಿಸ್ತಾನ ಮುಂದಾಗಿದೆ ಎಂದು ಅಲ್ಲಿನ ವಿದೇಶಾಂಗ ಇಲಾಖೆಯ ಅಧಿಕಾರಿಯೊಬ್ಬರು ಸುಳಿವು ನೀಡಿದ್ದಾರೆ. ಮಾನವೀಯ ನೆಲೆಯಲ್ಲಿ ಕೈದಿಗಳನ್ನು ಪಾಕಿಸ್ತಾನ ಬಿಡುಗಡೆ ಮಾಡಲು ಮುಂದಾಗಿದೆ ಅಷ್ಟೇ’ ಎಂದು ಹೇಳಿದ್ದಾರೆ.</p>.<p>‘2017ರಲ್ಲಿ ಪಾಕಿಸ್ತಾನ 800 ಸಲ ಕದನ ವಿರಾಮ ಉಲ್ಲಂಘನೆ ಮಾಡಿದೆ. ಕುಲಭೂಷಣ್ ಯಾದವ್ ಅವರ ತಾಯಿ ಮತ್ತು ಪತ್ನಿ ಜತೆಯಲ್ಲಿ ಪಾಕಿಸ್ತಾನ ಅಸಭ್ಯವಾಗಿ ನಡೆದುಕೊಂಡಿದೆ. ಮೊನ್ನೆಯಷ್ಟೆ ಭಾರತೀಯ ಸೈನಿಕರನ್ನು ಹತ್ಯೆ ಮಾಡಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕ್ರಿಕೆಟ್ ಸರಣಿ ಅನುಚಿತ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಶ್ಮೀರದ ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘಿಸುವ ಪಾಕಿಸ್ತಾನದ ಜತೆ ಕ್ರಿಕೆಟ್ ಸರಣಿ ನಡೆಸುವುದು ಅಸಾಧ್ಯ ಎಂದು ವಿದೇಶಾಂಗ ವ್ಯವಹಾರ ಸಚಿವೆ ಸುಷ್ಮಾ ಸ್ವರಾಜ್ ಸೋಮವಾರ ತಿಳಿಸಿದ್ದಾರೆ.</p>.<p>ವಿದೇಶಾಂಗ ವ್ಯವಹಾರಗಳ ಸಮಾಲೋಚನಾ ಸಮಿತಿ ಸಭೆಯಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಗಡಿಯಲ್ಲಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿ ಭಾರತೀಯ ಯೋಧರನ್ನು ಹತ್ಯೆ ಮಾಡುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಕ್ರಿಕೆಟ್ ಸರಣಿ ನಡೆಸುವುದು ಸೂಕ್ತವಲ್ಲ. ಪಾಕಿಸ್ತಾನ ಭಯೋತ್ಪಾದನೆಗೆ ಅಂತ್ಯ ಹಾಡುವವರೆಗೂ ಆ ದೇಶದೊಂದಿಗೆ ಕ್ರಿಕೆಟ್ ಸರಣಿ ನಡೆಯದು ಎಂದು ಸುಷ್ಮಾ ಸ್ವರಾಜ್ ಅಭಿಪ್ರಾಯಪಟ್ಟಿದ್ದಾರೆ.</p>.<p>‘70 ವರ್ಷ ವಯಸ್ಸು ಮೀರಿದವರು, ಮಹಿಳೆಯರು ಮತ್ತು ಅನಾರೋಗ್ಯದಿಂದ ಬಳಲುತ್ತಿರುವ ಕೈದಿಗಳನ್ನು ಬಿಡುಗಡೆ ಮಾಡಲು ಪಾಕಿಸ್ತಾನ ಮುಂದಾಗಿದೆ ಎಂದು ಅಲ್ಲಿನ ವಿದೇಶಾಂಗ ಇಲಾಖೆಯ ಅಧಿಕಾರಿಯೊಬ್ಬರು ಸುಳಿವು ನೀಡಿದ್ದಾರೆ. ಮಾನವೀಯ ನೆಲೆಯಲ್ಲಿ ಕೈದಿಗಳನ್ನು ಪಾಕಿಸ್ತಾನ ಬಿಡುಗಡೆ ಮಾಡಲು ಮುಂದಾಗಿದೆ ಅಷ್ಟೇ’ ಎಂದು ಹೇಳಿದ್ದಾರೆ.</p>.<p>‘2017ರಲ್ಲಿ ಪಾಕಿಸ್ತಾನ 800 ಸಲ ಕದನ ವಿರಾಮ ಉಲ್ಲಂಘನೆ ಮಾಡಿದೆ. ಕುಲಭೂಷಣ್ ಯಾದವ್ ಅವರ ತಾಯಿ ಮತ್ತು ಪತ್ನಿ ಜತೆಯಲ್ಲಿ ಪಾಕಿಸ್ತಾನ ಅಸಭ್ಯವಾಗಿ ನಡೆದುಕೊಂಡಿದೆ. ಮೊನ್ನೆಯಷ್ಟೆ ಭಾರತೀಯ ಸೈನಿಕರನ್ನು ಹತ್ಯೆ ಮಾಡಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕ್ರಿಕೆಟ್ ಸರಣಿ ಅನುಚಿತ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>