ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಪಕ್ಷದ ಸದೃಢತೆಗೆ ವೆಬ್‌ಸೈಟ್, ಮೊಬೈಲ್‌ ಅಪ್ಲಿಕೇಶನ್ ಬಿಡುಗಡೆ ಮಾಡಿದ ರಜನಿ

ಭ್ರಷ್ಟಾಚಾರ ನಿರ್ಮೂಲನೆಗೆ ಸಹಕರಿಸಲು ಮನವಿ
Last Updated 1 ಜನವರಿ 2018, 13:14 IST
ಅಕ್ಷರ ಗಾತ್ರ

ಚೆನ್ನೈ: ತಮಿಳು ನಟ ರಜನೀಕಾಂತ್ ಅವರು ತಮ್ಮ ಹೊಸ ಪಕ್ಷಕ್ಕೆ ಸಂಬಂಧಿಸಿದ ಕಾರ್ಯಗಳನ್ನು ಜನರಿಗೆ ದಾಟಿಸುವ ಸಲುವಾಗಿ ವೆಬ್‌ ಸೈಟ್ ಹಾಗೂ ಮೊಬೈಲ್‌ ಅಪ್ಲಿಕೇಶನ್ ಬಿಡುಗಡೆ ಮಾಡಿದ್ದಾರೆ.

ತಮಿಳುನಾಡು ಜನತೆ ಈ ಎರಡು ಮಾಧ್ಯಮಗಳನ್ನು ಬಳಸಿಕೊಂಡು ಭ್ರಷ್ಟಾಚಾರ ನಿರ್ಮೂಲನೆಗೆ ಕೈ ಜೋಡಿಸಬೇಕೆಂದು ಟ್ವಿಟರ್‌ನಲ್ಲಿ ಬಿಡುಗಡೆ ಮಾಡಿರುವ ವಿಡಿಯೊ ಮೂಲಕ ರಜನೀಕಾಂತ್ ಮನವಿ ಮಾಡಿದ್ದಾರೆ.

ನಾನು ಹೊಸದಾಗಿ ರಚಿಸುತ್ತಿರುವ ಪಕ್ಷದ ಪರವಾಗಿ ವೆಬ್‌ಸೈಟ್ ರಚಿಸಿದ್ದೇನೆ. ಈ ಮಾಧ್ಯಮದ ಮೂಲಕ ನಿಮ್ಮೆಲ್ಲರನ್ನೂ ಒಂದುಗೂಡಿಸುವ ಪ್ರಯತ್ನವಿದು. ಹಾಗಾಗಿ ಪ್ರತಿಯೊಬ್ಬರು ನಿಮ್ಮ ಮತದಾರರ ಗುರುತಿನ ಚೀಟಿಯ ಸಂಖ್ಯೆಯ ಮೂಲಕ ನೋಂದಣಿ ಮಾಡಿಕೊಳ್ಳಿ ಎಂದು ವಿಡಿಯೋದಲ್ಲಿ ಕೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT