ಚೆನ್ನೈ: ತಮಿಳು ನಟ ರಜನೀಕಾಂತ್ ಅವರು ತಮ್ಮ ಹೊಸ ಪಕ್ಷಕ್ಕೆ ಸಂಬಂಧಿಸಿದ ಕಾರ್ಯಗಳನ್ನು ಜನರಿಗೆ ದಾಟಿಸುವ ಸಲುವಾಗಿ ವೆಬ್ ಸೈಟ್ ಹಾಗೂ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ ಮಾಡಿದ್ದಾರೆ.
ತಮಿಳುನಾಡು ಜನತೆ ಈ ಎರಡು ಮಾಧ್ಯಮಗಳನ್ನು ಬಳಸಿಕೊಂಡು ಭ್ರಷ್ಟಾಚಾರ ನಿರ್ಮೂಲನೆಗೆ ಕೈ ಜೋಡಿಸಬೇಕೆಂದು ಟ್ವಿಟರ್ನಲ್ಲಿ ಬಿಡುಗಡೆ ಮಾಡಿರುವ ವಿಡಿಯೊ ಮೂಲಕ ರಜನೀಕಾಂತ್ ಮನವಿ ಮಾಡಿದ್ದಾರೆ.
ನಾನು ಹೊಸದಾಗಿ ರಚಿಸುತ್ತಿರುವ ಪಕ್ಷದ ಪರವಾಗಿ ವೆಬ್ಸೈಟ್ ರಚಿಸಿದ್ದೇನೆ. ಈ ಮಾಧ್ಯಮದ ಮೂಲಕ ನಿಮ್ಮೆಲ್ಲರನ್ನೂ ಒಂದುಗೂಡಿಸುವ ಪ್ರಯತ್ನವಿದು. ಹಾಗಾಗಿ ಪ್ರತಿಯೊಬ್ಬರು ನಿಮ್ಮ ಮತದಾರರ ಗುರುತಿನ ಚೀಟಿಯ ಸಂಖ್ಯೆಯ ಮೂಲಕ ನೋಂದಣಿ ಮಾಡಿಕೊಳ್ಳಿ ಎಂದು ವಿಡಿಯೋದಲ್ಲಿ ಕೇಳಿಕೊಂಡಿದ್ದಾರೆ.