ರಾಜ್ಯದ ವಿವಿಧ ಕಾನೂನು ಮಹಾವಿದ್ಯಾಲಯಗಳಿಂದ ಪದವಿ ಪಡೆದವರು ವಕೀಲರಾಗಿ ವೃತ್ತಿ ಪ್ರಾರಂಭಿಸಲು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಲ್ಲಿ ನೋಂದಾಯಿತರಾಗಬೇಕಾಗುತ್ತದೆ. ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ನಿಂದ ಪದವಿ ಪಡೆದ ಮಣಿಪುರ ರಾಜ್ಯದ ವಿದ್ಯಾರ್ಥಿಗಳು ನೋಂದಣಿ ಪ್ರಕ್ರಿಯೆ ಬಗ್ಗೆ ವಿಚಾರಿಸಲು ವಕೀಲರ ಪರಿಷತ್ತಿನ ಕಾರ್ಯದರ್ಶಿಯಾದ ನನ್ನ ಬಳಿಗೆ ಬಂದರು. ‘ನಮಸ್ಕಾರ ಸರ್’ ಅಂತ ಅಚ್ಚಕನ್ನಡದಲ್ಲಿ ಮಾತು ಆರಂಭಿಸಿದರು. ವಕೀಲರಾಗಿ ಸೇವೆ ಆರಂಭಿಸಲು ಏನು ಮಾಡಬೇಕು ಅಂತ ಸ್ಪಷ್ಟವಾಗಿ ಕನ್ನಡದಲ್ಲೇ ವಿಚಾರಿಸಿದರು.