<p><strong>ಬೆಂಗಳೂರು: </strong>ಮುಂದಿನ ಹದಿನೈದು ದಿನಗಳಲ್ಲಿ ಹೊಸ ತಾಲ್ಲೂಕುಗಳು ಅಸ್ತಿತ್ವಕ್ಕೆ ಬರಲಿದ್ದು, ತಾಲ್ಲೂಕು ಕಚೇರಿಗಳು ಕಾರ್ಯಾರಂಭ ಮಾಡಲಿವೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.</p>.<p>50 ಹೊಸ ತಾಲ್ಲೂಕುಗಳನ್ನು ಘೋಷಿಸಲಾಗಿದೆ. ಈ ಪೈಕಿ ಮೂರು ಅಥವಾ ನಾಲ್ಕು ತಾಲ್ಲೂಕುಗಳ ಆರಂಭ ವಿಳಂಬವಾಗಲಿದೆ ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ಸೋಮವಾರ ತಿಳಿಸಿದರು.</p>.<p>ಪ್ರತಿ ಹೊಸ ತಾಲ್ಲೂಕು ಅಸ್ತಿತ್ವಕ್ಕೆ ತರಲು ಅಂದಾಜು ₹5 ಕೋಟಿ ಅಗತ್ಯ. ಆದರೆ, ಅಷ್ಟೂ ಹಣ ಒಂದೇ ಬಾರಿ ನೀಡಬೇಕಾಗಿಲ್ಲ. ಮೂಲಸೌಲಭ್ಯ ಸೃಜಿ<br /> ಸಲು ಬೇಕಾಗಿರುವ ಅನುದಾನವನ್ನು ಹಂತ ಹಂತವಾಗಿ ನೀಡಲಾಗುವುದು ಎಂದರು. ತಹಶೀಲ್ದಾರ್ ಹುದ್ದೆಗೆ ಆಯ್ಕೆಯಾಗಿರುವವರು ತರಬೇತಿಯಲ್ಲಿ<br /> ದ್ದಾರೆ. ಅವರೆಲ್ಲ ಕರ್ತವ್ಯಕ್ಕೆ ಹಾಜರಾದ ಕೂಡಲೇ ಕಚೇರಿಗಳು ಆರಂಭವಾಗಲಿವೆ ಎಂದರು.</p>.<p><strong>ಅಕ್ರಮ–ಸಕ್ರಮ ಅವಧಿ ವಿಸ್ತರಣೆ:</strong> ಸರ್ಕಾರಿ ಕಂದಾಯ ಭೂಮಿಯಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡಿರುವವರು ಸಕ್ರಮಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರುವರಿ 26ರವರೆಗೂ ವಿಸ್ತರಿಸಲಾಗುವುದು ಎಂದು ಸಚಿವ ಕಾಗೋಡು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮುಂದಿನ ಹದಿನೈದು ದಿನಗಳಲ್ಲಿ ಹೊಸ ತಾಲ್ಲೂಕುಗಳು ಅಸ್ತಿತ್ವಕ್ಕೆ ಬರಲಿದ್ದು, ತಾಲ್ಲೂಕು ಕಚೇರಿಗಳು ಕಾರ್ಯಾರಂಭ ಮಾಡಲಿವೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.</p>.<p>50 ಹೊಸ ತಾಲ್ಲೂಕುಗಳನ್ನು ಘೋಷಿಸಲಾಗಿದೆ. ಈ ಪೈಕಿ ಮೂರು ಅಥವಾ ನಾಲ್ಕು ತಾಲ್ಲೂಕುಗಳ ಆರಂಭ ವಿಳಂಬವಾಗಲಿದೆ ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ಸೋಮವಾರ ತಿಳಿಸಿದರು.</p>.<p>ಪ್ರತಿ ಹೊಸ ತಾಲ್ಲೂಕು ಅಸ್ತಿತ್ವಕ್ಕೆ ತರಲು ಅಂದಾಜು ₹5 ಕೋಟಿ ಅಗತ್ಯ. ಆದರೆ, ಅಷ್ಟೂ ಹಣ ಒಂದೇ ಬಾರಿ ನೀಡಬೇಕಾಗಿಲ್ಲ. ಮೂಲಸೌಲಭ್ಯ ಸೃಜಿ<br /> ಸಲು ಬೇಕಾಗಿರುವ ಅನುದಾನವನ್ನು ಹಂತ ಹಂತವಾಗಿ ನೀಡಲಾಗುವುದು ಎಂದರು. ತಹಶೀಲ್ದಾರ್ ಹುದ್ದೆಗೆ ಆಯ್ಕೆಯಾಗಿರುವವರು ತರಬೇತಿಯಲ್ಲಿ<br /> ದ್ದಾರೆ. ಅವರೆಲ್ಲ ಕರ್ತವ್ಯಕ್ಕೆ ಹಾಜರಾದ ಕೂಡಲೇ ಕಚೇರಿಗಳು ಆರಂಭವಾಗಲಿವೆ ಎಂದರು.</p>.<p><strong>ಅಕ್ರಮ–ಸಕ್ರಮ ಅವಧಿ ವಿಸ್ತರಣೆ:</strong> ಸರ್ಕಾರಿ ಕಂದಾಯ ಭೂಮಿಯಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡಿರುವವರು ಸಕ್ರಮಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರುವರಿ 26ರವರೆಗೂ ವಿಸ್ತರಿಸಲಾಗುವುದು ಎಂದು ಸಚಿವ ಕಾಗೋಡು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>