ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಏನೇನು ಸಾಧನೆ ಮಾಡಿದೆ ಎಂಬ ಜಾಹೀರಾತುಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಅದರಲ್ಲಿ ಎಐಸಿಸಿ ಹಿಂದಿನ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಹಾಲಿ ಅಧ್ಯಕ್ಷ ರಾಹುಲ್ ಗಾಂಧಿ ಭಾವಚಿತ್ರಗಳಿವೆ. ಈ ಜಾಹೀರಾತುಗಳಿಗೆ ಪಕ್ಷದಿಂದ ಹಣ ನೀಡಬೇಕಿತ್ತು. ಆದರೆ, ಸರ್ಕಾರದಿಂದ ಭರಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.