<p><strong>ಬೆಂಗಳೂರು:</strong> ‘ಪಕ್ಷದ ಸಾಧನೆಗಳ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಬಾಹಿರವಾಗಿ ₹ 129 ಕೋಟಿ ವೆಚ್ಚ ಮಾಡಿದ್ದಾರೆ’ ಎಂದು ಆರೋಪಿಸಿ ಬೆಂಗಳೂರು ನಾಗರಿಕ ಹಕ್ಕು ಹೋರಾಟ ಸಮಿತಿ ಉಪಾಧ್ಯಕ್ಷ ಬಿ. ಗಣೇಶ್ ಸಿಂಗ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ಸೋಮವಾರ ದೂರು ನೀಡಿದ್ದಾರೆ.</p>.<p>ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಏನೇನು ಸಾಧನೆ ಮಾಡಿದೆ ಎಂಬ ಜಾಹೀರಾತುಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಅದರಲ್ಲಿ ಎಐಸಿಸಿ ಹಿಂದಿನ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಹಾಲಿ ಅಧ್ಯಕ್ಷ ರಾಹುಲ್ ಗಾಂಧಿ ಭಾವಚಿತ್ರಗಳಿವೆ. ಈ ಜಾಹೀರಾತುಗಳಿಗೆ ಪಕ್ಷದಿಂದ ಹಣ ನೀಡಬೇಕಿತ್ತು. ಆದರೆ, ಸರ್ಕಾರದಿಂದ ಭರಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.</p>.<p>ಬಿಬಿಎಂಪಿ ಅನುಮತಿ ಪಡೆಯದೇ ಬೆಂಗಳೂರಿನ 489 ಬಸ್ ನಿಲ್ದಾ ಗಳಲ್ಲಿ ಸರ್ಕಾರದ ಸಾಧನೆಗಳನ್ನು ನಾಲ್ಕೂವರೆ ವರ್ಷಗಳಿಂದ ಪ್ರಚಾರ ಮಾಡಲಾಗುತ್ತಿದೆ. ಪಾಲಿಕೆಗೆ ಸಿದ್ದರಾಮಯ್ಯ ₹ 13 ಕೋಟಿ ಪಾವತಿಸಬೇಕಿದೆ. ಈ ಸಂಬಂಧ ಪಾಲಿಕೆಯ ಜಾಹೀರಾತು ವಿಭಾಗದ ಸಹಾಯಕ ಆಯುಕ್ತರು ಎರಡು ಬಾರಿ ನೋಟಿಸ್ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪಕ್ಷದ ಸಾಧನೆಗಳ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಬಾಹಿರವಾಗಿ ₹ 129 ಕೋಟಿ ವೆಚ್ಚ ಮಾಡಿದ್ದಾರೆ’ ಎಂದು ಆರೋಪಿಸಿ ಬೆಂಗಳೂರು ನಾಗರಿಕ ಹಕ್ಕು ಹೋರಾಟ ಸಮಿತಿ ಉಪಾಧ್ಯಕ್ಷ ಬಿ. ಗಣೇಶ್ ಸಿಂಗ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ಸೋಮವಾರ ದೂರು ನೀಡಿದ್ದಾರೆ.</p>.<p>ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಏನೇನು ಸಾಧನೆ ಮಾಡಿದೆ ಎಂಬ ಜಾಹೀರಾತುಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಅದರಲ್ಲಿ ಎಐಸಿಸಿ ಹಿಂದಿನ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಹಾಲಿ ಅಧ್ಯಕ್ಷ ರಾಹುಲ್ ಗಾಂಧಿ ಭಾವಚಿತ್ರಗಳಿವೆ. ಈ ಜಾಹೀರಾತುಗಳಿಗೆ ಪಕ್ಷದಿಂದ ಹಣ ನೀಡಬೇಕಿತ್ತು. ಆದರೆ, ಸರ್ಕಾರದಿಂದ ಭರಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.</p>.<p>ಬಿಬಿಎಂಪಿ ಅನುಮತಿ ಪಡೆಯದೇ ಬೆಂಗಳೂರಿನ 489 ಬಸ್ ನಿಲ್ದಾ ಗಳಲ್ಲಿ ಸರ್ಕಾರದ ಸಾಧನೆಗಳನ್ನು ನಾಲ್ಕೂವರೆ ವರ್ಷಗಳಿಂದ ಪ್ರಚಾರ ಮಾಡಲಾಗುತ್ತಿದೆ. ಪಾಲಿಕೆಗೆ ಸಿದ್ದರಾಮಯ್ಯ ₹ 13 ಕೋಟಿ ಪಾವತಿಸಬೇಕಿದೆ. ಈ ಸಂಬಂಧ ಪಾಲಿಕೆಯ ಜಾಹೀರಾತು ವಿಭಾಗದ ಸಹಾಯಕ ಆಯುಕ್ತರು ಎರಡು ಬಾರಿ ನೋಟಿಸ್ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>