<p><strong>ನವದೆಹಲಿ/ಬೆಂಗಳೂರು:</strong> ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಸ್ಥಾಪನೆ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ(ಐಎಂಎ) ಮಂಗಳವಾರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.</p>.<p>ಮುಷ್ಕರ ಬೆಂಬಲಿಸಿ ರಾಜ್ಯದಲ್ಲಿರುವ ಸುಮಾರು 15 ಸಾವಿರ ಖಾಸಗಿ ಆಸ್ಪತ್ರೆಗಳ ಹೊರ ರೋಗಿ ಚಿಕಿತ್ಸಾ ವಿಭಾಗ ಬಂದ್ ಮಾಡಲು ಐಎಂಎ ಕರ್ನಾಟಕ ಶಾಖೆ ನಿರ್ಧರಿಸಿದೆ.</p>.<p>ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಹೊರರೋಗಿ ಚಿಕಿತ್ಸಾ ವಿಭಾಗ (ಒಪಿಡಿ) ಕಾರ್ಯನಿರ್ವಹಿಸುವುದಿಲ್ಲ. ಆದರೆ, ತುರ್ತು ಚಿಕಿತ್ಸಾ ಸೌಲಭ್ಯ, ಔಷಧಿ ಅಂಗಡಿಗಳು ಮತ್ತು ಒಳರೋಗಿ ವಿಭಾಗ ಎಂದಿನಂತೆ ಕಾರ್ಯ ನಿರ್ವಹಿಸಲಿವೆ.</p>.<p>ಒಂದು ದಿನದ ಮುಷ್ಕರದಲ್ಲಿ ದೇಶದ ಎಲ್ಲ ಖಾಸಗಿ ಆಸ್ಪತ್ರೆಯ ವೈದ್ಯರು ಪಾಲ್ಗೊಳ್ಳಲಿದ್ದು, ಆರೋಗ್ಯ ಸೇವೆ ಸ್ಥಗಿತಗೊಳಿಸಲಾಗುವುದು ಎಂದು ಐಎಂಎ ರಾಷ್ಟ್ರೀಯ ಅಧ್ಯಕ್ಷ ಡಾ. ರವಿ ವಾಂಖೇಡ್ಕರ್ ಹೇಳಿದ್ದಾರೆ.</p>.<p>ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ವೈದ್ಯರು ಜಿಲ್ಲಾಧಿಕಾರಿ ಕಚೇರಿಗಳಿಗೆ ತೆರಳಿ ಮನವಿ ಸಲ್ಲಿಸಲಿದ್ದಾರೆ ಎಂದು ಐಎಂಎ ಕರ್ನಾಟಕ ಶಾಖೆ ಅಧ್ಯಕ್ಷ ಡಾ. ರವೀಂದ್ರ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>ಬೆಂಗಳೂರಿನಲ್ಲೂ ಆಸ್ಪತ್ರೆಗಳು ಬಂದ್ ಆಗಲಿವೆ. ಪ್ರತಿಭಟನೆ ನಡೆಸುವ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ ಎಂದು ಐಎಂಎ ಬೆಂಗಳೂರು ಶಾಖೆ ಅಧ್ಯಕ್ಷ ಡಾ. ಎಸ್. ಶ್ರೀನಿವಾಸ್ ಸ್ಪಷ್ಟಪಡಿಸಿದ್ದಾರೆ.</p>.<p>ಮಸೂದೆಗೆ ವಿರೋಧ: ಭಾರತೀಯ ವೈದ್ಯಕೀಯ ಮಂಡಳಿಯ(ಎಂಸಿಐ) ಜಾಗದಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಸ್ಥಾಪಿಸುವ ಮಸೂದೆಯನ್ನು ಐಎಂಎ ತೀವ್ರವಾಗಿ ವಿರೋಧಿಸಿದೆ.</p>.<p>ಕಳೆದ ಶುಕ್ರವಾರ ಲೋಕಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಲಾಗಿದ್ದು, ಮುಂದಿನ ನಾಲ್ಕು ದಿನ ಸಂಸತ್ನಲ್ಲಿ ಮಸೂದೆ ಮೇಲೆ ಚರ್ಚೆ ನಡೆಯುವ ಸಾಧ್ಯತೆ ಇದೆ.</p>.<p>ಈ ಮಸೂದೆಯನ್ನು ಮತ್ತೊಮ್ಮೆ ಪರಿಶೀಲನೆಗಾಗಿ ಸಂಸದೀಯ ಸಮಿತಿಗೆ ಕಳುಹಿಸಬೇಕು ಎಂಬ ನಿಲುವನ್ನು ವಿರೋಧ ಪಕ್ಷಗಳ ಕೆಲವು ಸದಸ್ಯರು ಹೊಂದಿದ್ದಾರೆ.</p>.<p><strong>ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಸೂಚನೆ</strong></p>.<p>ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಎಲ್ಲ ರೋಗಿಗಳಿಗೂ ಚಿಕಿತ್ಸೆ ನೀಡಲು ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ನಿರ್ದೇಶಕ ಡಾ. ನಟರಾಜ್ ತಿಳಿಸಿದರು.</p>.<p>‘ಖಾಸಗಿ ಆಸ್ಪತ್ರೆಗಳು ಹೊರ ರೋಗಿ ವಿಭಾಗ ಬಂದ್ ಮಾಡುತ್ತಿರುವ ಮಾಹಿತಿ ಅಧಿಕೃತವಾಗಿ ಸಿಕ್ಕಿಲ್ಲ. ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಬಂದ್ ಆದರೂ ರೋಗಿಗಳಿಗೆ ತೊಂದರೆ ಆಗದಂತೆ ಎಚ್ಚರಿಕೆ ವಹಿಸುತ್ತೇವೆ’ ಎಂದರು.</p>.<p><strong>ಮಸೂದೆಗೆ ವೈದ್ಯರ ವಿರೋಧ ಯಾಕೆ?</strong></p>.<p>* ಭಾರತೀಯ ವೈದ್ಯಕೀಯ ಮಂಡಳಿ ಮುಚ್ಚಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಸ್ಥಾಪಿಸಲು ಹೊರಟಿರುವುದಕ್ಕೆ ಆಕ್ಷೇಪ</p>.<p>* ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿನ ಶೇ 80ರಷ್ಟು ಸೀಟುಗಳ ಶುಲ್ಕ ನಿಯಂತ್ರಿಸುವ ಅಧಿಕಾರವನ್ನು ರಾಜ್ಯ ಸರ್ಕಾರ ಹೊಂದಿದೆ</p>.<p>* ವೈದ್ಯಕೀಯ ಆಯೋಗ ಸ್ಥಾಪನೆಯಾದರೆ ಶೇ 60ರಷ್ಟು ಸೀಟುಗಳ ಶುಲ್ಕ ನಿಗದಿ ಅಧಿಕಾರ ಕಾಲೇಜುಗಳಿಗೆ ಸಿಗಲಿದೆ.</p>.<p>* ಮಕ್ಕಳನ್ನು ವೈದ್ಯರನ್ನಾಗಿ ಮಾಡಬೇಕೆಂಬ ಪೋಷಕರ ಆಸೆಗೆ ಪೆಟ್ಟು ಬೀಳಲಿದೆ</p>.<p>* ಕೆಲವೇ ದಿನಗಳ ತರಬೇತಿ ಪಡೆದ ಇತರೆ ಪದ್ಧತಿಯ ವೈದ್ಯರು ಕೂಡ ಅಧಿಕೃತವಾಗಿ ಅಲೋಪತಿ ವೈದ್ಯಕೀಯ ಪದ್ಧತಿ ಅಳವಡಿಸಿಕೊಳ್ಳಲು ಅವಕಾಶ ಆಗಲಿದೆ.</p>.<p>* ಇದು ಅಪಾಯಕಾರಿ ಬೆಳವಣಿಗೆಯಾಗಿದ್ದು, ರೋಗಿಗಳ ಸಾವಿನ ಸಂಖ್ಯೆ ಹೆಚ್ಚಾಗಲಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ/ಬೆಂಗಳೂರು:</strong> ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಸ್ಥಾಪನೆ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ(ಐಎಂಎ) ಮಂಗಳವಾರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.</p>.<p>ಮುಷ್ಕರ ಬೆಂಬಲಿಸಿ ರಾಜ್ಯದಲ್ಲಿರುವ ಸುಮಾರು 15 ಸಾವಿರ ಖಾಸಗಿ ಆಸ್ಪತ್ರೆಗಳ ಹೊರ ರೋಗಿ ಚಿಕಿತ್ಸಾ ವಿಭಾಗ ಬಂದ್ ಮಾಡಲು ಐಎಂಎ ಕರ್ನಾಟಕ ಶಾಖೆ ನಿರ್ಧರಿಸಿದೆ.</p>.<p>ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಹೊರರೋಗಿ ಚಿಕಿತ್ಸಾ ವಿಭಾಗ (ಒಪಿಡಿ) ಕಾರ್ಯನಿರ್ವಹಿಸುವುದಿಲ್ಲ. ಆದರೆ, ತುರ್ತು ಚಿಕಿತ್ಸಾ ಸೌಲಭ್ಯ, ಔಷಧಿ ಅಂಗಡಿಗಳು ಮತ್ತು ಒಳರೋಗಿ ವಿಭಾಗ ಎಂದಿನಂತೆ ಕಾರ್ಯ ನಿರ್ವಹಿಸಲಿವೆ.</p>.<p>ಒಂದು ದಿನದ ಮುಷ್ಕರದಲ್ಲಿ ದೇಶದ ಎಲ್ಲ ಖಾಸಗಿ ಆಸ್ಪತ್ರೆಯ ವೈದ್ಯರು ಪಾಲ್ಗೊಳ್ಳಲಿದ್ದು, ಆರೋಗ್ಯ ಸೇವೆ ಸ್ಥಗಿತಗೊಳಿಸಲಾಗುವುದು ಎಂದು ಐಎಂಎ ರಾಷ್ಟ್ರೀಯ ಅಧ್ಯಕ್ಷ ಡಾ. ರವಿ ವಾಂಖೇಡ್ಕರ್ ಹೇಳಿದ್ದಾರೆ.</p>.<p>ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ವೈದ್ಯರು ಜಿಲ್ಲಾಧಿಕಾರಿ ಕಚೇರಿಗಳಿಗೆ ತೆರಳಿ ಮನವಿ ಸಲ್ಲಿಸಲಿದ್ದಾರೆ ಎಂದು ಐಎಂಎ ಕರ್ನಾಟಕ ಶಾಖೆ ಅಧ್ಯಕ್ಷ ಡಾ. ರವೀಂದ್ರ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>ಬೆಂಗಳೂರಿನಲ್ಲೂ ಆಸ್ಪತ್ರೆಗಳು ಬಂದ್ ಆಗಲಿವೆ. ಪ್ರತಿಭಟನೆ ನಡೆಸುವ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ ಎಂದು ಐಎಂಎ ಬೆಂಗಳೂರು ಶಾಖೆ ಅಧ್ಯಕ್ಷ ಡಾ. ಎಸ್. ಶ್ರೀನಿವಾಸ್ ಸ್ಪಷ್ಟಪಡಿಸಿದ್ದಾರೆ.</p>.<p>ಮಸೂದೆಗೆ ವಿರೋಧ: ಭಾರತೀಯ ವೈದ್ಯಕೀಯ ಮಂಡಳಿಯ(ಎಂಸಿಐ) ಜಾಗದಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಸ್ಥಾಪಿಸುವ ಮಸೂದೆಯನ್ನು ಐಎಂಎ ತೀವ್ರವಾಗಿ ವಿರೋಧಿಸಿದೆ.</p>.<p>ಕಳೆದ ಶುಕ್ರವಾರ ಲೋಕಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಲಾಗಿದ್ದು, ಮುಂದಿನ ನಾಲ್ಕು ದಿನ ಸಂಸತ್ನಲ್ಲಿ ಮಸೂದೆ ಮೇಲೆ ಚರ್ಚೆ ನಡೆಯುವ ಸಾಧ್ಯತೆ ಇದೆ.</p>.<p>ಈ ಮಸೂದೆಯನ್ನು ಮತ್ತೊಮ್ಮೆ ಪರಿಶೀಲನೆಗಾಗಿ ಸಂಸದೀಯ ಸಮಿತಿಗೆ ಕಳುಹಿಸಬೇಕು ಎಂಬ ನಿಲುವನ್ನು ವಿರೋಧ ಪಕ್ಷಗಳ ಕೆಲವು ಸದಸ್ಯರು ಹೊಂದಿದ್ದಾರೆ.</p>.<p><strong>ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಸೂಚನೆ</strong></p>.<p>ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಎಲ್ಲ ರೋಗಿಗಳಿಗೂ ಚಿಕಿತ್ಸೆ ನೀಡಲು ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ನಿರ್ದೇಶಕ ಡಾ. ನಟರಾಜ್ ತಿಳಿಸಿದರು.</p>.<p>‘ಖಾಸಗಿ ಆಸ್ಪತ್ರೆಗಳು ಹೊರ ರೋಗಿ ವಿಭಾಗ ಬಂದ್ ಮಾಡುತ್ತಿರುವ ಮಾಹಿತಿ ಅಧಿಕೃತವಾಗಿ ಸಿಕ್ಕಿಲ್ಲ. ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಬಂದ್ ಆದರೂ ರೋಗಿಗಳಿಗೆ ತೊಂದರೆ ಆಗದಂತೆ ಎಚ್ಚರಿಕೆ ವಹಿಸುತ್ತೇವೆ’ ಎಂದರು.</p>.<p><strong>ಮಸೂದೆಗೆ ವೈದ್ಯರ ವಿರೋಧ ಯಾಕೆ?</strong></p>.<p>* ಭಾರತೀಯ ವೈದ್ಯಕೀಯ ಮಂಡಳಿ ಮುಚ್ಚಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಸ್ಥಾಪಿಸಲು ಹೊರಟಿರುವುದಕ್ಕೆ ಆಕ್ಷೇಪ</p>.<p>* ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿನ ಶೇ 80ರಷ್ಟು ಸೀಟುಗಳ ಶುಲ್ಕ ನಿಯಂತ್ರಿಸುವ ಅಧಿಕಾರವನ್ನು ರಾಜ್ಯ ಸರ್ಕಾರ ಹೊಂದಿದೆ</p>.<p>* ವೈದ್ಯಕೀಯ ಆಯೋಗ ಸ್ಥಾಪನೆಯಾದರೆ ಶೇ 60ರಷ್ಟು ಸೀಟುಗಳ ಶುಲ್ಕ ನಿಗದಿ ಅಧಿಕಾರ ಕಾಲೇಜುಗಳಿಗೆ ಸಿಗಲಿದೆ.</p>.<p>* ಮಕ್ಕಳನ್ನು ವೈದ್ಯರನ್ನಾಗಿ ಮಾಡಬೇಕೆಂಬ ಪೋಷಕರ ಆಸೆಗೆ ಪೆಟ್ಟು ಬೀಳಲಿದೆ</p>.<p>* ಕೆಲವೇ ದಿನಗಳ ತರಬೇತಿ ಪಡೆದ ಇತರೆ ಪದ್ಧತಿಯ ವೈದ್ಯರು ಕೂಡ ಅಧಿಕೃತವಾಗಿ ಅಲೋಪತಿ ವೈದ್ಯಕೀಯ ಪದ್ಧತಿ ಅಳವಡಿಸಿಕೊಳ್ಳಲು ಅವಕಾಶ ಆಗಲಿದೆ.</p>.<p>* ಇದು ಅಪಾಯಕಾರಿ ಬೆಳವಣಿಗೆಯಾಗಿದ್ದು, ರೋಗಿಗಳ ಸಾವಿನ ಸಂಖ್ಯೆ ಹೆಚ್ಚಾಗಲಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>