<p><strong>ಕೋಲ್ಕತ್ತ: </strong>ಯುವಜನರಲ್ಲಿ ವಿಜ್ಞಾನದ ಬಗ್ಗೆ ಪ್ರೀತಿ ಮತ್ತು ತಿಳಿವಳಿಕೆ ಹೆಚ್ಚಿಸಲು ವೈಜ್ಞಾನಿಕ ಸಂವಹನದಲ್ಲಿ ಪ್ರಾದೇಶಿಕ ಭಾಷೆಗಳನ್ನು ದೊಡ್ಡ ಮಟ್ಟದಲ್ಲಿ ಬಳಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು.</p>.<p>‘ಭಾಷೆ ಯಾವಾಗಲೂ ಕಲಿಯುವಿಕೆಯನ್ನು ಸರಾಗಗೊಳಿಸಬೇಕೇ ವಿನಾ ಅಡ್ಡಿ ಪಡಿಸಬಾರದು’ ಎಂದು ಅವರು ಹೇಳಿದರು.</p>.<p>‘ದೇಶದ ಪ್ರತಿಯೊಬ್ಬ ವಿಜ್ಞಾನಿ ಮತ್ತು ಸಂಶೋಧಕ ‘ನವ ಭಾರತ’ಕ್ಕಾಗಿ ಹೊಸ ಹೊಸ ಪರಿಕಲ್ಪನೆ ಮತ್ತು ಸಂಶೋಧನೆಗಳಿಗೆ ದಾರಿ ತೋರಬೇಕು’ ಎಂದು ಮೋದಿ ಕರೆ ನೀಡಿದರು.</p>.<p>ಭೌತ ವಿಜ್ಞಾನಿ ಪ್ರೊ. ಸತ್ಯೇಂದ್ರ ನಾಥ್ ಬೋಸ್ 125 ಜನ್ಮ ದಿನಾಚರಣೆಗೆ ಪೂರ್ವಭಾವಿಯಾಗಿ ಕೋಲ್ಕತ್ತದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಅವರು ಮಾತನಾಡಿದರು.</p>.<p>‘ದೇಶದ ವಿಜ್ಞಾನಿಗಳು ಮತ್ತು ಸಂಶೋಧರು ತಮ್ಮ ಜ್ಞಾನವನ್ನು ಜನರ ಅನುಕೂಲಕ್ಕಾಗಿ ಹಾಗೂ ಅವರ ಸಾಮಾಜಿಕ ಆರ್ಥಿಕ ಅಗತ್ಯಗಳನ್ನು ಪೂರೈಸಲು ಬಳಸಬೇಕು’ ಎಂದು ಅವರು ಸಲಹೆ ನೀಡಿದರು.</p>.<p>ವಿನೂತನ ಕಲ್ಪನೆ ಮತ್ತು ಸಂಶೋಧನೆಗಳು ಬಡ ಜನರ ಮೇಲೆ ಬೀರುವ ಸಕಾರಾತ್ಮಕ ಪರಿಣಾಮವನ್ನು ಆಧರಿಸಿ ಅವುಗಳ ಅಂತಿಮ ಫಲಶ್ರುತಿಯನ್ನು ನಿರ್ಣಯಿಸುವುದು ಇಂದಿನ ಜಗತ್ತಿನಲ್ಲಿ ಅತ್ಯಂತ ಮುಖ್ಯ ಎಂದು ಪ್ರಧಾನಿ ಪ್ರತಿಪಾದಿಸಿದರು.</p>.<p>‘ವಿಜ್ಞಾನಿಯೊಬ್ಬರು ಕನಿಷ್ಠ ಒಂದು ಮಗುವಿಗೆ ಮಾರ್ಗದರ್ಶನ ನೀಡಲಿ. ಈ ಮೂಲಕ ಒಂದು ಲಕ್ಷ ವಿದ್ಯಾರ್ಥಿಗಳನ್ನು ವಿಜ್ಞಾನದ ಜಗತ್ತಿಗೆ ಸೇರಿಸಬಹುದು’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ: </strong>ಯುವಜನರಲ್ಲಿ ವಿಜ್ಞಾನದ ಬಗ್ಗೆ ಪ್ರೀತಿ ಮತ್ತು ತಿಳಿವಳಿಕೆ ಹೆಚ್ಚಿಸಲು ವೈಜ್ಞಾನಿಕ ಸಂವಹನದಲ್ಲಿ ಪ್ರಾದೇಶಿಕ ಭಾಷೆಗಳನ್ನು ದೊಡ್ಡ ಮಟ್ಟದಲ್ಲಿ ಬಳಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು.</p>.<p>‘ಭಾಷೆ ಯಾವಾಗಲೂ ಕಲಿಯುವಿಕೆಯನ್ನು ಸರಾಗಗೊಳಿಸಬೇಕೇ ವಿನಾ ಅಡ್ಡಿ ಪಡಿಸಬಾರದು’ ಎಂದು ಅವರು ಹೇಳಿದರು.</p>.<p>‘ದೇಶದ ಪ್ರತಿಯೊಬ್ಬ ವಿಜ್ಞಾನಿ ಮತ್ತು ಸಂಶೋಧಕ ‘ನವ ಭಾರತ’ಕ್ಕಾಗಿ ಹೊಸ ಹೊಸ ಪರಿಕಲ್ಪನೆ ಮತ್ತು ಸಂಶೋಧನೆಗಳಿಗೆ ದಾರಿ ತೋರಬೇಕು’ ಎಂದು ಮೋದಿ ಕರೆ ನೀಡಿದರು.</p>.<p>ಭೌತ ವಿಜ್ಞಾನಿ ಪ್ರೊ. ಸತ್ಯೇಂದ್ರ ನಾಥ್ ಬೋಸ್ 125 ಜನ್ಮ ದಿನಾಚರಣೆಗೆ ಪೂರ್ವಭಾವಿಯಾಗಿ ಕೋಲ್ಕತ್ತದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಅವರು ಮಾತನಾಡಿದರು.</p>.<p>‘ದೇಶದ ವಿಜ್ಞಾನಿಗಳು ಮತ್ತು ಸಂಶೋಧರು ತಮ್ಮ ಜ್ಞಾನವನ್ನು ಜನರ ಅನುಕೂಲಕ್ಕಾಗಿ ಹಾಗೂ ಅವರ ಸಾಮಾಜಿಕ ಆರ್ಥಿಕ ಅಗತ್ಯಗಳನ್ನು ಪೂರೈಸಲು ಬಳಸಬೇಕು’ ಎಂದು ಅವರು ಸಲಹೆ ನೀಡಿದರು.</p>.<p>ವಿನೂತನ ಕಲ್ಪನೆ ಮತ್ತು ಸಂಶೋಧನೆಗಳು ಬಡ ಜನರ ಮೇಲೆ ಬೀರುವ ಸಕಾರಾತ್ಮಕ ಪರಿಣಾಮವನ್ನು ಆಧರಿಸಿ ಅವುಗಳ ಅಂತಿಮ ಫಲಶ್ರುತಿಯನ್ನು ನಿರ್ಣಯಿಸುವುದು ಇಂದಿನ ಜಗತ್ತಿನಲ್ಲಿ ಅತ್ಯಂತ ಮುಖ್ಯ ಎಂದು ಪ್ರಧಾನಿ ಪ್ರತಿಪಾದಿಸಿದರು.</p>.<p>‘ವಿಜ್ಞಾನಿಯೊಬ್ಬರು ಕನಿಷ್ಠ ಒಂದು ಮಗುವಿಗೆ ಮಾರ್ಗದರ್ಶನ ನೀಡಲಿ. ಈ ಮೂಲಕ ಒಂದು ಲಕ್ಷ ವಿದ್ಯಾರ್ಥಿಗಳನ್ನು ವಿಜ್ಞಾನದ ಜಗತ್ತಿಗೆ ಸೇರಿಸಬಹುದು’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>