<p><strong>ಶ್ರೀನಗರ: </strong>ಉಗ್ರ ಸಂಘಟನೆ ಹಿಜ್ಬುಲ್ ಮುಜಾಹಿದೀನ್ ಕಮಾಂಡರ್ ರಿಯಾಜ್ ನಾಯಕೊ ಬೆದರಿಕೆವೊಡ್ಡಿದ ಕಾರಣ ಕಾಶ್ಮೀರ ವಿಶ್ವವಿದ್ಯಾಲಯದ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್ಎಸ್ಯುಐ) ಅಧ್ಯಕ್ಷ ಸೈಯದ್ ಮುನೀಬ್ ಭಾನುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.</p>.<p>ಎನ್ಎಸ್ಯುಐ ಭಾಗವಾಗಿರುವ ವಿದ್ಯಾರ್ಥಿಗಳನ್ನು ಉದ್ದೇಶಿಸಿ ರಿಯಾಜ್ ಮಾತನಾಡಿದ್ದು, ಆ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಿದ್ದಾನೆ. ಅದರಲ್ಲಿ, ‘ಕಾಶ್ಮೀರ ವಿಶ್ವವಿದ್ಯಾಲಯದ ಎನ್ಎಸ್ಯುಐನ ಭಾಗವಾಗಿರುವವರು ಶೀಘ್ರ ಅದರಿಂದ ಹೊರಗೆ ಬರಬೇಕು, ಇಲ್ಲದಿದ್ದರೆ ಪಶ್ಚಾತ್ತಾಪ ಪಡುವುದಕ್ಕೂ ಅವರಿಗೆ ಅವಕಾಶ ನೀಡುವುದಿಲ್ಲ’ ಎಂದು ಬೆದರಿಸಿದ್ದ.</p>.<p>‘ಎನ್ಎಸ್ಯುಐನ ಅಧ್ಯಕ್ಷ ಯಾರು, ಅದಕ್ಕಾಗಿ ಯಾರು ಕೆಲಸ ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ. ವಿಶ್ವವಿದ್ಯಾಲಯದಲ್ಲಿ ನಮ್ಮ ಸಂಘಟನೆಯವರೂ ಇದ್ದಾರೆ. ಅವರು ಏನೂ ಗೊತ್ತಿಲ್ಲದಂತೆ ಸುಮ್ಮನೆ ಇರುವುದಿಲ್ಲ’ ಎಂದು ರಿಯಾಜ್ ತಿಳಿಸಿದ್ದ.</p>.<p>ರಿಯಾಜ್ ನಾಯಕೊ, 2016ರಲ್ಲಿ ಹತ್ಯೆಗೀಡಾದ ಹಿಜ್ಬುಲ್ ಕಮಾಂಡರ್ ಬುರ್ಹಾನ್ ವಾನಿಯ ಸಮಕಾಲೀನ. ವಾನಿ ಹತ್ಯೆ ನಂತರ ಕಾಶ್ಮೀರದಲ್ಲಿ ನಡೆದ ನಾಗರಿಕರು ಮತ್ತು ಭದ್ರತಾಪಡೆಗಳ ನಡುವಿನ ಘರ್ಷಣೆಗಳಲ್ಲಿ ಇದುವರೆಗೆ ಸುಮಾರು 100 ಮಂದಿ ಮೃತಪಟ್ಟಿದ್ದಾರೆ.</p>.<p>ವಿಡಿಯೊ ಬಹಿರಂಗವಾದ ಕೂಡಲೇ ಹೇಳಿಕೆ ಬಿಡುಗಡೆ ಮಾಡಿರುವ ಎನ್ಎಸ್ಯುಐ ಅಧ್ಯಕ್ಷ ಸೈಯದ್ ಮುನೀಬ್, ‘ನನ್ನ ಸಹವರ್ತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಿಚಾರಗಳಲ್ಲಿ ಮತ್ತು ಮೆಸ್ಗೆ ಸಂಬಂಧಿಸಿ ಸಹಾಯ ಮಾಡುವ ಅವಕಾಶ ಪಡೆದಿದ್ದೆ. ಇದೀಗ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ: </strong>ಉಗ್ರ ಸಂಘಟನೆ ಹಿಜ್ಬುಲ್ ಮುಜಾಹಿದೀನ್ ಕಮಾಂಡರ್ ರಿಯಾಜ್ ನಾಯಕೊ ಬೆದರಿಕೆವೊಡ್ಡಿದ ಕಾರಣ ಕಾಶ್ಮೀರ ವಿಶ್ವವಿದ್ಯಾಲಯದ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್ಎಸ್ಯುಐ) ಅಧ್ಯಕ್ಷ ಸೈಯದ್ ಮುನೀಬ್ ಭಾನುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.</p>.<p>ಎನ್ಎಸ್ಯುಐ ಭಾಗವಾಗಿರುವ ವಿದ್ಯಾರ್ಥಿಗಳನ್ನು ಉದ್ದೇಶಿಸಿ ರಿಯಾಜ್ ಮಾತನಾಡಿದ್ದು, ಆ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಿದ್ದಾನೆ. ಅದರಲ್ಲಿ, ‘ಕಾಶ್ಮೀರ ವಿಶ್ವವಿದ್ಯಾಲಯದ ಎನ್ಎಸ್ಯುಐನ ಭಾಗವಾಗಿರುವವರು ಶೀಘ್ರ ಅದರಿಂದ ಹೊರಗೆ ಬರಬೇಕು, ಇಲ್ಲದಿದ್ದರೆ ಪಶ್ಚಾತ್ತಾಪ ಪಡುವುದಕ್ಕೂ ಅವರಿಗೆ ಅವಕಾಶ ನೀಡುವುದಿಲ್ಲ’ ಎಂದು ಬೆದರಿಸಿದ್ದ.</p>.<p>‘ಎನ್ಎಸ್ಯುಐನ ಅಧ್ಯಕ್ಷ ಯಾರು, ಅದಕ್ಕಾಗಿ ಯಾರು ಕೆಲಸ ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ. ವಿಶ್ವವಿದ್ಯಾಲಯದಲ್ಲಿ ನಮ್ಮ ಸಂಘಟನೆಯವರೂ ಇದ್ದಾರೆ. ಅವರು ಏನೂ ಗೊತ್ತಿಲ್ಲದಂತೆ ಸುಮ್ಮನೆ ಇರುವುದಿಲ್ಲ’ ಎಂದು ರಿಯಾಜ್ ತಿಳಿಸಿದ್ದ.</p>.<p>ರಿಯಾಜ್ ನಾಯಕೊ, 2016ರಲ್ಲಿ ಹತ್ಯೆಗೀಡಾದ ಹಿಜ್ಬುಲ್ ಕಮಾಂಡರ್ ಬುರ್ಹಾನ್ ವಾನಿಯ ಸಮಕಾಲೀನ. ವಾನಿ ಹತ್ಯೆ ನಂತರ ಕಾಶ್ಮೀರದಲ್ಲಿ ನಡೆದ ನಾಗರಿಕರು ಮತ್ತು ಭದ್ರತಾಪಡೆಗಳ ನಡುವಿನ ಘರ್ಷಣೆಗಳಲ್ಲಿ ಇದುವರೆಗೆ ಸುಮಾರು 100 ಮಂದಿ ಮೃತಪಟ್ಟಿದ್ದಾರೆ.</p>.<p>ವಿಡಿಯೊ ಬಹಿರಂಗವಾದ ಕೂಡಲೇ ಹೇಳಿಕೆ ಬಿಡುಗಡೆ ಮಾಡಿರುವ ಎನ್ಎಸ್ಯುಐ ಅಧ್ಯಕ್ಷ ಸೈಯದ್ ಮುನೀಬ್, ‘ನನ್ನ ಸಹವರ್ತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಿಚಾರಗಳಲ್ಲಿ ಮತ್ತು ಮೆಸ್ಗೆ ಸಂಬಂಧಿಸಿ ಸಹಾಯ ಮಾಡುವ ಅವಕಾಶ ಪಡೆದಿದ್ದೆ. ಇದೀಗ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>