ಕರಾಳ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗಳು ಬಂದ್ ಆಗಿವೆ. ನಗರದ ಪ್ರತಿಷ್ಠಿತ ಆಸ್ಪತ್ರೆಗಳಾದ ವಿವೇಕಾನಂದ ನರ್ಸಿಂಗ್ ಹೋಂ, ತತ್ವದರ್ಶ, ಶಕುಂತಲಾ, ಶಿವಕೃಪಾ, ಲೈಫ್ ಲೈನ್, ಸುಚಿರಾಯು ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗ ಸಂಪೂರ್ಣ ಬಂದ್ ಆಗಿದ್ದು, ಸಂಜೆ 6 ಗಂಟೆ ನಂತರ ಅವುಗಳು ಪುನಃ ಕಾರ್ಯಾರಂಭ ಮಾಡಲಿವೆ. ಇನ್ನು ಕೆಲ ಖಾಸಗಿ ಆಸ್ಪತ್ರೆಗಳ ಎದುರು ಸೂಚನಾ ಫಲಕವನ್ನ ಅಳವಡಿಸಲಾಗಿದ್ದು, ಹೊರ ರೋಗಿಗಳು ಸಹಕರಿಸುವಂತೆ ಮನವಿ ಮಾಡಿದ್ದಾರೆ.