ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಮಾಯಣ, ಮಹಾಭಾರತ ಎಂಬುದು ನಡೆದೇ ಇಲ್ಲ, ರಾಮಸೇತು ಕಾಲ್ಪನಿಕ ಎಂದವರು, ಪರಮ ಪಾವನ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಕೋಳಿ, ಮೀನು ತಿಂದು ದರ್ಶನಗೈದವರು, ಹಿಂದೂ ಶ್ರದ್ಧಾ ಕೇಂದ್ರಗಳ ಮೇಲೆ ದಾಳಿ, ಹಿಂದೂಗಳ ಮಾರಣ ಹೋಮವಾಗುತ್ತಿದ್ದರೂ ಮೌನವಾಗಿದ್ದವರು ಇದೀಗ ಎಚ್ಚೆತ್ತುಕೊಂಡಿದ್ದಾರೆ’ ಎಂದರು.