3ರಂದು ಮಧ್ಯಾಹ್ನ 3.30ಕ್ಕೆ ಸರಿಯಾಗಿ ಸ್ವಾಮೀಜಿ ಅವರು ಉಡುಪಿಗೆ ಆಗಮಿಸುವರು. ನಗರದ ಜೋಡುಗಟ್ಟೆಯಲ್ಲಿ ಅವರಿಗೆ ಸ್ವಾಗತ ಕೋರಲಾಗುತ್ತದೆ. ಅಲ್ಲಿಂದ ಮಠದವರೆಗೆ ಅವರನ್ನು ಮೆರವಣಿಗೆ ಮೂಲಕ ಕರೆತರಲಾಗುತ್ತದೆ. ಸುಮಾರು 75 ಕಲಾ ತಂಡಗಳು ಈ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಅವರು ಇದರ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಸುಮಾರು 2 ಗಂಟೆಗಳ ಕಾಲ ಮೆರವಣಿಗೆ ನಡೆಯಲಿದ್ದು, ಸಾವಿರಾರು ಮಂದಿ ವೀಕ್ಷಿಸುವ ನಿರೀಕ್ಷೆ ಇದೆ.