ತಾಂಬಾ: ಎಚ್.ಡಿ.ಕುಮಾರಸ್ವಾಮಿ ಅವರ ಆಡಳಿತದಲ್ಲಿ ಜಾರಿಗೆ ತಂದಿರುವ ಅಭಿವೃದ್ಧಿಪರ ಯೋಜನೆಗಳು, ಮಾಡಿದ ಸಾಧನೆಗಳನ್ನು ಮೆಚ್ಚಿ ಮತಕ್ಷೇತ್ರದ ಜನರು ಜೆಡಿಎಸ್ ಕಡೆ ಹರಿದು ಬರುತ್ತಿದ್ದಾರೆ ಎಂದು ಮಾಜಿ ಸಚಿವ ಎಂ.ಸಿ.ಮನಗೂಳಿ ವಿಶ್ವಾಸ ವ್ಯಕ್ತಪಡಿಸಿದರು.
ಗ್ರಾಮದಲ್ಲಿ ಈಚೆಗೆ ಜೆಡಿಎಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ವಿವಿಧ ಪಕ್ಷದ 300ಕ್ಕೂ ಅಧಿಕ ಮುಖಂಡರನ್ನು ಬರಮಾಡಿಕೊಂಡು ಮಾತನಾಡಿದ ಅವರು, ಈ ಬಾರಿ ಸರ್ಕಾರ ರಚನೆಯಲ್ಲಿ ಉತ್ತರ ಕರ್ನಾಟಕ ಸಿಂಹಪಾಲು ಕಾರ್ಯನಿರ್ವಹಿಸುತ್ತದೆ. ಈ ಭಾಗದಲ್ಲಿ ಹೆಚ್ಚು ಸಂಘಟಿತಗೊಳ್ಳುತ್ತಿರುವ ಜೆಡಿಎಸ್ ಹೆಚ್ಚಿನ ಸ್ಥಾನಗಳಲ್ಲಿ ಗೆದ್ದು, ಅಧಿಕಾರ ಹಿಡಿಯುವುದು ಗ್ಯಾರಂಟಿ ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಹಂಗರಗಿ ಮಾತನಾಡಿ, ರಾಜ್ಯದಲ್ಲಿ ಬದಲಾವಣೆ ಪರ್ವ ಆರಂಭವಾಗಿದೆ. ಮುಂಬರುವ ಚುನಾವಣಿಯಲ್ಲಿ ಬಹುಮತದೊಂದಿಗೆ ಜೆ.ಡಿ.ಎಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯಿತಿ ಸದಸ್ಯ ರೀಯಾಜ ಮೂಮಿನ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರೇಷ್ಮಾ ಪಡೇಕನೂರ, ಡಾ.ಮುತ್ತು ಮನಗೂಳಿ, ಅಕ್ಬರ ಮುಲ್ಲಾ ಮಾತನಾಡಿದರು.