<p><strong>ತಾಂಬಾ</strong>: ಎಚ್.ಡಿ.ಕುಮಾರಸ್ವಾಮಿ ಅವರ ಆಡಳಿತದಲ್ಲಿ ಜಾರಿಗೆ ತಂದಿರುವ ಅಭಿವೃದ್ಧಿಪರ ಯೋಜನೆಗಳು, ಮಾಡಿದ ಸಾಧನೆಗಳನ್ನು ಮೆಚ್ಚಿ ಮತಕ್ಷೇತ್ರದ ಜನರು ಜೆಡಿಎಸ್ ಕಡೆ ಹರಿದು ಬರುತ್ತಿದ್ದಾರೆ ಎಂದು ಮಾಜಿ ಸಚಿವ ಎಂ.ಸಿ.ಮನಗೂಳಿ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಗ್ರಾಮದಲ್ಲಿ ಈಚೆಗೆ ಜೆಡಿಎಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ವಿವಿಧ ಪಕ್ಷದ 300ಕ್ಕೂ ಅಧಿಕ ಮುಖಂಡರನ್ನು ಬರಮಾಡಿಕೊಂಡು ಮಾತನಾಡಿದ ಅವರು, ಈ ಬಾರಿ ಸರ್ಕಾರ ರಚನೆಯಲ್ಲಿ ಉತ್ತರ ಕರ್ನಾಟಕ ಸಿಂಹಪಾಲು ಕಾರ್ಯನಿರ್ವಹಿಸುತ್ತದೆ. ಈ ಭಾಗದಲ್ಲಿ ಹೆಚ್ಚು ಸಂಘಟಿತಗೊಳ್ಳುತ್ತಿರುವ ಜೆಡಿಎಸ್ ಹೆಚ್ಚಿನ ಸ್ಥಾನಗಳಲ್ಲಿ ಗೆದ್ದು, ಅಧಿಕಾರ ಹಿಡಿಯುವುದು ಗ್ಯಾರಂಟಿ ಎಂದರು.</p>.<p>ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಹಂಗರಗಿ ಮಾತನಾಡಿ, ರಾಜ್ಯದಲ್ಲಿ ಬದಲಾವಣೆ ಪರ್ವ ಆರಂಭವಾಗಿದೆ. ಮುಂಬರುವ ಚುನಾವಣಿಯಲ್ಲಿ ಬಹುಮತದೊಂದಿಗೆ ಜೆ.ಡಿ.ಎಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯ ರೀಯಾಜ ಮೂಮಿನ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರೇಷ್ಮಾ ಪಡೇಕನೂರ, ಡಾ.ಮುತ್ತು ಮನಗೂಳಿ, ಅಕ್ಬರ ಮುಲ್ಲಾ ಮಾತನಾಡಿದರು.</p>.<p>ಮಹಮ್ಮದ ದೇವರ, ಸದಾಶಿವ ಗಡ್ಡದ, ಅಪ್ಪಾಸಾಹೇಬ ಅವಟಿ, ವಿಠ್ಠಲ ಮೂಲಿಮನಿ, ಚನ್ನಮಲ್ಲಪ್ಪ ದೇಗಿನಾಳ, ಕುಬೇರ ನಾವದಗಿ, ರಾಜಶೇಖರ ಮಂಜಿ, ಶರಣಪ್ಪ ಗುಬ್ಯಡ, ಭಿರಪ್ಪ ವಗ್ಗಿ, ಮಲ್ಕಪ್ಪ ಹೋರ್ತಿ, ಸತೀಶ ನಾಟೀಕಾರ, ಶಿವು ಮೂಲಿಮನಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಾಂಬಾ</strong>: ಎಚ್.ಡಿ.ಕುಮಾರಸ್ವಾಮಿ ಅವರ ಆಡಳಿತದಲ್ಲಿ ಜಾರಿಗೆ ತಂದಿರುವ ಅಭಿವೃದ್ಧಿಪರ ಯೋಜನೆಗಳು, ಮಾಡಿದ ಸಾಧನೆಗಳನ್ನು ಮೆಚ್ಚಿ ಮತಕ್ಷೇತ್ರದ ಜನರು ಜೆಡಿಎಸ್ ಕಡೆ ಹರಿದು ಬರುತ್ತಿದ್ದಾರೆ ಎಂದು ಮಾಜಿ ಸಚಿವ ಎಂ.ಸಿ.ಮನಗೂಳಿ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಗ್ರಾಮದಲ್ಲಿ ಈಚೆಗೆ ಜೆಡಿಎಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ವಿವಿಧ ಪಕ್ಷದ 300ಕ್ಕೂ ಅಧಿಕ ಮುಖಂಡರನ್ನು ಬರಮಾಡಿಕೊಂಡು ಮಾತನಾಡಿದ ಅವರು, ಈ ಬಾರಿ ಸರ್ಕಾರ ರಚನೆಯಲ್ಲಿ ಉತ್ತರ ಕರ್ನಾಟಕ ಸಿಂಹಪಾಲು ಕಾರ್ಯನಿರ್ವಹಿಸುತ್ತದೆ. ಈ ಭಾಗದಲ್ಲಿ ಹೆಚ್ಚು ಸಂಘಟಿತಗೊಳ್ಳುತ್ತಿರುವ ಜೆಡಿಎಸ್ ಹೆಚ್ಚಿನ ಸ್ಥಾನಗಳಲ್ಲಿ ಗೆದ್ದು, ಅಧಿಕಾರ ಹಿಡಿಯುವುದು ಗ್ಯಾರಂಟಿ ಎಂದರು.</p>.<p>ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಹಂಗರಗಿ ಮಾತನಾಡಿ, ರಾಜ್ಯದಲ್ಲಿ ಬದಲಾವಣೆ ಪರ್ವ ಆರಂಭವಾಗಿದೆ. ಮುಂಬರುವ ಚುನಾವಣಿಯಲ್ಲಿ ಬಹುಮತದೊಂದಿಗೆ ಜೆ.ಡಿ.ಎಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯ ರೀಯಾಜ ಮೂಮಿನ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರೇಷ್ಮಾ ಪಡೇಕನೂರ, ಡಾ.ಮುತ್ತು ಮನಗೂಳಿ, ಅಕ್ಬರ ಮುಲ್ಲಾ ಮಾತನಾಡಿದರು.</p>.<p>ಮಹಮ್ಮದ ದೇವರ, ಸದಾಶಿವ ಗಡ್ಡದ, ಅಪ್ಪಾಸಾಹೇಬ ಅವಟಿ, ವಿಠ್ಠಲ ಮೂಲಿಮನಿ, ಚನ್ನಮಲ್ಲಪ್ಪ ದೇಗಿನಾಳ, ಕುಬೇರ ನಾವದಗಿ, ರಾಜಶೇಖರ ಮಂಜಿ, ಶರಣಪ್ಪ ಗುಬ್ಯಡ, ಭಿರಪ್ಪ ವಗ್ಗಿ, ಮಲ್ಕಪ್ಪ ಹೋರ್ತಿ, ಸತೀಶ ನಾಟೀಕಾರ, ಶಿವು ಮೂಲಿಮನಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>