<p><strong>ಹಳಿಯಾಳ: </strong>ಸಹಕಾರ ಸಂಸ್ಥೆಗಳು ಸಂಸ್ಥೆಯ ಲಾಭದ ಹಿತದೃಷ್ಟಿಯಿಂದ ನಡೆಯದೇ ರೈತರ, ಬಡವರ, ಗ್ರಾಮೀಣ ಜನತೆಯ ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಪ್ರಯತ್ನಿಸಬೇಕು ಎಂದು ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.</p>.<p>ಸ್ಥಳೀಯ ರೈತರ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ‘ಸಹಕಾರ ಸಂಸ್ಥೆಗಳು ಸಮಯಕ್ಕೆ ಅನುಗುಣವಾಗಿ ಸಹಕಾರಿ ಕ್ಷೇತ್ರದಲ್ಲಿ ಪಾರದರ್ಶಕವಾಗಿ ಬೆಳೆಯಬೇಕು. ಹಳಿಯಾಳದ ರೈತರ ಸೇವಾ ಸಹಕಾರಿ ಸಂಘ 1912ರಲ್ಲಿ ಸ್ಥಾಪನೆಗೊಂಡು ಈ ವರೆಗೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಾ ಬಂದಿರುವುದು ಶ್ಲಾಘನೀಯ. ಸರ್ಕಾರ ಕೂಡ ಸಹಕಾರ ರಂಗದ ಮುಖಾಂತರ ರೈತರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದು ರೈತರ ಪ್ರಗತಿ ಮಾಡುತ್ತಿದೆ. ಹಳಿಯಾಳ ತಾಲ್ಲೂಕಿನಲ್ಲಿ ಕಳೆದ 2 ವರ್ಷಗಳಲ್ಲಿ ₹ 116 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರಾಗಿದ್ದು, 16300 ರೈತರಿಗೆ ಲಾಭವಾಗಿದೆ’ ಎಂದರು.</p>.<p>ರೈತರ ಸೇವಾ ಸಹಕಾರಿ ಸಂಘದಲ್ಲಿ ಈ ಹಿಂದೆ ಅಧ್ಯಕ್ಷರಾಗಿ, ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದವರಿಗೆ ಸನ್ಮಾನಿಸಲಾಯಿತು. ಹಾಗೂ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಾಯಿತು. ಕೆ.ಕೆ.ಹಳ್ಳಿಯ ಮಠದ ಸುಬ್ರಹ್ಮಣ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p>ವಿಧಾನಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ, ಸಂಘದ ಅಧ್ಯಕ್ಷ ಶಿವಪುತ್ರಪ್ಪ ನುಚ್ಚಂಬ್ಲಿ, ಕೆಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಎಸ್.ಪಿ. ಬಾಂದುರ್ಗಿ, ಮಾಜಿ ನಿರ್ದೇಶಕ ಎನ್.ಪಿ. ಗಾಂವಕರ, ನಿವೃತ್ತ ವ್ಯವಸ್ಥಾಪಕ ಎಸ್.ಪಿ. ಶೆಟ್ಟಿ, ಸಹಕಾರ ಉಪನಿಬಂಧಕ ಜಯಪ್ರಕಾಶ, ಪುರಸಭೆ ಅಧ್ಯಕ್ಷ ಉಮೇಶ ಬೊಳಶೆಟ್ಟಿ ಮಾತನಾಡಿದರು.</p>.<p>ಉಪಾದ್ಯಕ್ಷ ಸುಭಾಷ ಶಿಂಧೆ, ಸದಸ್ಯರಾದ ಅನಂತ ಘೋಟ್ನೇಕರ, ರೇಷ್ಮಾ ಪಾಟೀಲ, ರುಕ್ಮಾ ಭಾಗ್ವತಕರ, ಪ್ರಭಾಕರ ಗಜಾಕೋಶ, ತವನಪ್ಪ ಶಿರಗಾಪುರ, ಗುರುನಾಥ ಗೌಡ, ಆನಂದ ಕಂಚನಾಳಕರ, ಶಿವಾಜಿ ನರಸಾನಿ, ಮುಖ್ಯ ಕಾರ್ಯನಿರ್ವಾಹಕ ಬಿ.ವೈ. ಪವಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಳಿಯಾಳ: </strong>ಸಹಕಾರ ಸಂಸ್ಥೆಗಳು ಸಂಸ್ಥೆಯ ಲಾಭದ ಹಿತದೃಷ್ಟಿಯಿಂದ ನಡೆಯದೇ ರೈತರ, ಬಡವರ, ಗ್ರಾಮೀಣ ಜನತೆಯ ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಪ್ರಯತ್ನಿಸಬೇಕು ಎಂದು ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.</p>.<p>ಸ್ಥಳೀಯ ರೈತರ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ‘ಸಹಕಾರ ಸಂಸ್ಥೆಗಳು ಸಮಯಕ್ಕೆ ಅನುಗುಣವಾಗಿ ಸಹಕಾರಿ ಕ್ಷೇತ್ರದಲ್ಲಿ ಪಾರದರ್ಶಕವಾಗಿ ಬೆಳೆಯಬೇಕು. ಹಳಿಯಾಳದ ರೈತರ ಸೇವಾ ಸಹಕಾರಿ ಸಂಘ 1912ರಲ್ಲಿ ಸ್ಥಾಪನೆಗೊಂಡು ಈ ವರೆಗೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಾ ಬಂದಿರುವುದು ಶ್ಲಾಘನೀಯ. ಸರ್ಕಾರ ಕೂಡ ಸಹಕಾರ ರಂಗದ ಮುಖಾಂತರ ರೈತರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದು ರೈತರ ಪ್ರಗತಿ ಮಾಡುತ್ತಿದೆ. ಹಳಿಯಾಳ ತಾಲ್ಲೂಕಿನಲ್ಲಿ ಕಳೆದ 2 ವರ್ಷಗಳಲ್ಲಿ ₹ 116 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರಾಗಿದ್ದು, 16300 ರೈತರಿಗೆ ಲಾಭವಾಗಿದೆ’ ಎಂದರು.</p>.<p>ರೈತರ ಸೇವಾ ಸಹಕಾರಿ ಸಂಘದಲ್ಲಿ ಈ ಹಿಂದೆ ಅಧ್ಯಕ್ಷರಾಗಿ, ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದವರಿಗೆ ಸನ್ಮಾನಿಸಲಾಯಿತು. ಹಾಗೂ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಾಯಿತು. ಕೆ.ಕೆ.ಹಳ್ಳಿಯ ಮಠದ ಸುಬ್ರಹ್ಮಣ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p>ವಿಧಾನಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ, ಸಂಘದ ಅಧ್ಯಕ್ಷ ಶಿವಪುತ್ರಪ್ಪ ನುಚ್ಚಂಬ್ಲಿ, ಕೆಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಎಸ್.ಪಿ. ಬಾಂದುರ್ಗಿ, ಮಾಜಿ ನಿರ್ದೇಶಕ ಎನ್.ಪಿ. ಗಾಂವಕರ, ನಿವೃತ್ತ ವ್ಯವಸ್ಥಾಪಕ ಎಸ್.ಪಿ. ಶೆಟ್ಟಿ, ಸಹಕಾರ ಉಪನಿಬಂಧಕ ಜಯಪ್ರಕಾಶ, ಪುರಸಭೆ ಅಧ್ಯಕ್ಷ ಉಮೇಶ ಬೊಳಶೆಟ್ಟಿ ಮಾತನಾಡಿದರು.</p>.<p>ಉಪಾದ್ಯಕ್ಷ ಸುಭಾಷ ಶಿಂಧೆ, ಸದಸ್ಯರಾದ ಅನಂತ ಘೋಟ್ನೇಕರ, ರೇಷ್ಮಾ ಪಾಟೀಲ, ರುಕ್ಮಾ ಭಾಗ್ವತಕರ, ಪ್ರಭಾಕರ ಗಜಾಕೋಶ, ತವನಪ್ಪ ಶಿರಗಾಪುರ, ಗುರುನಾಥ ಗೌಡ, ಆನಂದ ಕಂಚನಾಳಕರ, ಶಿವಾಜಿ ನರಸಾನಿ, ಮುಖ್ಯ ಕಾರ್ಯನಿರ್ವಾಹಕ ಬಿ.ವೈ. ಪವಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>