ನಗರದ ಕುಚ್ಚಪ್ಪನಪೇಟೆಯಲ್ಲಿರುವ ವೇಣುಗೋಪಾಲಸ್ವಾಮಿ ದೇವಾಲಯ, ರುಮಾಲೆ ವೃತ್ತದ ಗಣಪತಿ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ವಿಶೇಷ ಅಲಂಕಾರಗಳನ್ನು ಏರ್ಪಡಿಸಲಾಗಿತ್ತು. ಅಂಗಡಿ ಮುಗ್ಗಟ್ಟುಗಳಿಗೆ ವಿಶೇಷ ದೀಪಾಲಂಕಾರ. ಕೇಕ್ ಕತ್ತರಿಸುವ ಮೂಲಕ ವರ್ಷಾಚರಣೆ ಆಚರಣೆ, ಪರಸ್ಪರ ಶುಭಾಶಯಗಳ ವಿನಿಮಯ ಎಲ್ಲಡೆ ಕಂಡು ಬಂದಿತು.